ಒಳ ಮೀಸಲಾತಿ ಜಾರಿಗೆ ತರಲು ಒತ್ತಾಯ
Demand to implement internal reservation
ಹೂವಿನಹಡಗಲಿ 18: ನ್ಯಾ.ನಾಗಮೋಹನದಾಸ್ ಆಯೋಗ ವರದಿಯನ್ನು ಅಂಗೀಕರಿಸಿ ಒಳಮೀಸಲಾತಿ ಶೀಘ್ರವಾಗಿ ಜಾರಿಗೊಳಿಸಲು ವಿಧಾನಸಭೆಯಲ್ಲಿ ಬೆಂಬಲ ನೀಡಬೇಕು ಹಾಗೂ ಮುಖ್ಯಮಂತ್ರಿ ಮೇಲೆ ಒತ್ತಡ ತರುವಂತೆ ಒತ್ತಾಯಿಸಿ ಸಮಿತಿಯ ಪದಾಧಿಕಾರಿಗಳು, ಮುಖಂಡರು ಶಾಸಕರ ಜನ ಸಂಪರ್ಕ ಕಚೇರಿ ಯಲ್ಲಿ ಆಪ್ತ ಸಹಾಯಕ ಅರುಣಿ ಸುರೇಶ್ ಸೋಮವಾರ ಮನವಿ ಸಲ್ಲಿಸಿದರು.
ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ಜವಾಬ್ದಾರಿ ಸರ್ಕಾರದ ಮೇಲಿದೆ. ಒಳಮೀಸಲಾತಿಯನ್ನು ರಾಜ್ಯ ಸರ್ಕಾರವೇ ಜಾರಿಗೊಳಿಸಬಹುದು ಎಂದು ಸುಪ್ರಿಂಕೋರ್ಟ್ ತೀರ್ು ನೀಡಿ ವರ್ಷ ಕಳೆದರೂ ಸರ್ಕಾರ ಕಾಲಹರಣ ಮಾಡಿಕೊಂಡಿರುವುದು ಸಮುದಾಯದ ನಿರ್ಲಕ್ಷ್ಯಕ್ಕೆ ಕಾರಣವಾಗಿದೆ ಎಂದರು. ಒಳಮೀಸಲಾತಿ ಜಾರಿ ಆಗುವವರೆಗೆ ಉದ್ಯೋಗ. ಅವಕಾಶಗಳನ್ನು ನಿಲ್ಲಿಸಲಾಗಿದೆ ಕೂಡಲೇ ಸಿಎಂ. ಸಿದ್ದರಾಮಯ್ಯನವರು ಕಾಲಹರಣ ಮಾಡದೇ 19ರಂದು ನಡೆಯುವ. ಸಂಪುಟ ಸಭೆಯಲ್ಲಿ ಜಾರಿಗೊಳಿಸದೇ ಸಭೆಯಲ್ಲಿ ಸಮಿತಿ ರಚಿಸಿದರೆ ಉಗ್ರ ಹೋರಾಟ ಮಾಡುವುದಾಗಿದಾಗಿ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಸಮಿತಿ ಅಧ್ಯಕ್ಷ ಕೆ.ದುರುಗೇಶ, ಎಸ್.ನಿಂಗರಾಜ, ಲಲಿತಮ್ಮ, ಪಿ.ನಿಂಗಪ್ಪ, ಮಂಜಪ್ಪ, ಕಗ್ಗಲಪ್ಪ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 