ಅಕ್ರಮ ಮರಳು ಗಣಿಗಾರಿಕೆ ತಡೆಗೆ ಒತ್ತಾಯ
Demand to stop illegal sand mining
ಹೂವಿನಹಡಗಲಿ 22: ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳುತ್ತಿಲ್ಲವೆಂದು ಆರೋಪಿಸಿ ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ ಮತ್ತು ವಿವಿಧ ದಲಿತ ಸಂಘಟನೆಗಳಿಂದ ಬುಧವಾರ ಪ್ರತಿಭಟನೆ ಮಾಡಿದರು. ತುಂಗಭದ್ರಾ ನದಿ ತೀರದ ತಾಲೂಕಿನ ಹರವಿ, ನವಲಿ ಸೋವೇನಹಳ್ಳಿ, ಮೈಲಾರ ಹೊನ್ನೂರು ಗ್ರಾಮಗಳ ನದಿ ತೀರದಲ್ಲಿ ರಾತ್ರಿ ವೇಳೆ ಅಕ್ರಮವಾಗಿ ಮರಳುಗಾರಿಕೆ ದಂಧೆ ರಾಜಾರೋಷವಾಗಿ ನಡೆಯುತ್ತಿದ್ದು, ಕಡಿವಾಣ ಹಾಕದೆ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಪರೋಕ್ಷವಾಗಿ ಅಕ್ರಮ ಮರಳು ಲೂಟಿಕೋರರಿಗೆ ಅಧಿಕಾರಿಗಳು ಸಾತ್ ನೀಡುತ್ತಿದ್ದಾರೆಂದು ಆರೋಪಿಸಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ತಹಶಿಲ್ದಾರರ ಮೂಲಕ ಮನವಿ ಸಲ್ಲಿಸಿದರು. ಕೆ ಆರ್ ಎಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರಾದ ಸುಭಾನಿಸಾಬ್ ಮಾತನಾಡಿ, ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ದಂಧೆಗೆ ಕಡಿವಾಣ ಹಾಕದೇ ಅಧಿಕಾರಿಗಳು ತಮಗೇನು ಗೊತ್ತಿಲ್ಲ ಎಂಬಂತೆ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ ಎಂದು ದೂರಿದರು. ದಲಿತ ಸೇನೆ ಮುಖಂಡ ದುರ್ಗೇಶ್, ದೇವೇಂದ್ರ್ಪ ಮಾತನಾಡಿದರು. ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕ ಸಂಘದ ತಾಲೂಕ ಅಧ್ಯಕ್ಷ ಜಂಗ್ಲಿ ಸಾಬ್, ಎ ಎಸ್ ಎಸ್ ಕೆ. ಭರ್ಮಪ್ಪ, ಎಸ್ ಡಿ ಪಿ ಐ ನ ದೇವರಾಜ್, ಕಿಸಾನ್ ಸಭಾ ತಾಲೂಕ ಅಧ್ಯಕ್ಷ ಡಿ ಮುಕುಂದ ಗೌಡ. ಶರಣಪ್ಪ ಅವಿನಾಶ ಸೇರಿದಂತೆ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 