ಕೃಷ್ಣಾ ತೀರದ ಜನರ ಸಂಕಷ್ಟಕ್ಕಿಲ್ಲ ಅಂತ್ಯ :ಭೀಕರ ಪ್ರವಾಹದ ಬಳಿಕ ಡೆಂಗ್ಯೂ, ಚಿಕುನ್ ಗುನ್ಯ ಭೀತಿ
ಯಾದಗಿರಿ: ಹೈದರಾಬಾದ್ ಕರ್ನಾ ಟಕದ ಕೃಷ್ಣಾ ಹಾಗೂ ಭೀಮಾ ನದಿ ತೀರದ ಜನರ ಸಂಕಷ್ಟ ಸದ್ಯಕ್ಕೆ ಕೊನೆಗೊಳ್ಳುವಂತೆ ಕಾಣುತ್ತಿಲ್ಲ ಭೀಕರ ಪ್ರವಾಹದ ನಂತರ ಇದೀಗ ಚಿಕುನ್ ಗುನ್ಯ ಹಾಗೂ ಡೆಂಗ್ಯೂ ಭೀತಿ ಎದುರಾಗಿದೆ.
ಯಾದಗಿರಿಯಲ್ಲಿ ಈವರೆಗೂ 1521 ಶಂಕಿತ ಡೆಂಗ್ಯೂ ಜ್ವರ ಹಾಗೂ 912 ಶಂಕಿತ ಚಿಕುನ್ ಗುನ್ಯಾ ಪ್ರಕರಣಗಳು ದಾಖಲಾಗಿವೆ ರೋಗಿಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ
ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಸಕರ್ಾರಿ ಆಸ್ಪತ್ರೆಗಳ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ ಎಂದು ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಎಂ ಎಸ್ ಪಾಟೀಲ್ ಹೇಳಿದ್ದಾರೆ.
ಪ್ರವಾಹಪೀಡಿತ ಸ್ಥಳಗಳಿಗೆ ಆರೋಗ್ಯ ಇಲಾಖೆ ಕಾರ್ಯಕರ್ತರು ಭೇಟಿ ನೀಡಿ, ಜಠರದ ಉರಿ, ಟೈಫಾಯಿಡ್ ಹಾಗೂ ಇನ್ನಿತರ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ, "ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ನಾವು ಗರಿಷ್ಠ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದೇವೆ ಸಾಮಾನ್ಯವಾಗಿ ಪ್ರವಾಹದ ನೀರು ಕಡಿಮೆಯಾದ 15 ರಿಂದ 20 ದಿನಗಳ ನಂತರ ಸಾಂಕ್ರಾಮಿಕ ರೋಗ ಹರಡುತ್ತದೆ" ಎಂದು ಅವರು ಮಾಹಿತಿ ನೀಡಿದ್ದಾರೆ.
ಜನರು ಕಲುಷಿತ ನೀರನ್ನು ಕುಡಿಯುವವುದರಿಂದ ಇಂತಹ ಕಾಯಿಲೆಗಳಿಗೆ ಗುರಿಯಾಗಬೇಕಾಗುತ್ತದೆ ಹೀಗಾಗಿ ಕಾಯಿಸಿದ ನೀರನ್ನು ಕುಡಿಯಬೇಕು ಎಂದು ಜನರಲ್ಲಿ ವಿನಂತಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 