ಡೆಂಗ್ಯೂ ಜ್ವರ ನಿಯಂತ್ರಣ ಸಮೀಕ್ಷೆ ವಿಶೇಷ ಕಾರ್ಯಕ್ರಮ
ಬಳ್ಳಾರಿ,ಜು.04: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬಳ್ಳಾರಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಡೆಂಗ್ಯೂ ಜ್ವರ ನಿಯಂತ್ರಣ ಸಮೀಕ್ಷೆಯನ್ನು ನಗರದ ವಿವಿಧ ಪ್ರದೇಶಗಳಲ್ಲಿ ಹಮ್ಮಿಕೊಳ್ಳಲಾಯಿತು.
ಸಮೀಕ್ಷೆಯನ್ನು ಸ್ವಯಂ ಸೇವಕರ ಜೊತೆ ಆಶಾ ಕಾರ್ಯಕತರ್ೆಯರು ಪ್ರತಿ ಮನೆ ಮನೆಗೆ ಹೋಗಿ ಅವರು ಸಂಗ್ರಹಿಸಿದ್ದ ನೀರಲ್ಲಿ ಲಾರ್ವ ಇರುವ ನೀರನ್ನು ಚೆಲ್ಲಿಸಿ ಪ್ರತಿ ಮನೆಯಲ್ಲಿ ಡೆಂಗ್ಯೂ ಜ್ವರ ಹೇಗೆ ತಡೆಗಟ್ಟಬೇಕೆಂದು ವಿವರವಾಗಿ ತಿಳಿಸಿದರು. ವಿವಿಧ ತೆಗ್ಗು ಪ್ರದೇಶಗಳಾದ ನಾಲಾಗಡ್ಡ, ಕೇಸರಿ ಬೀದಿ, ಗ್ವಾಲರಹಟ್ಟಿ, ಲಾಲಾಕಮಾನ್ ಪ್ರದೇಶದ ಮನೆಗಳಲ್ಲಿ ಸಂಗ್ರಹಿಸಿದ್ದ ನೀರಿನಲ್ಲಿ ಲಾರ್ವ ಕಂಡುಬಂದ ಕಾರಣ ಔಷಧಿಯನ್ನು ಹಾಕಿ ಡೆಂಗ್ಯೂ ಸೊಳ್ಳೆಗಳು ಹೇಗೆ ನಾಶ ಹೊಂದುತ್ತವೆ ಎಂದು ಮನೆಯ ಜನರಿಗೆ ತಿಳಿಸಿದರು. ಮನೆಗಳಲ್ಲಿ ಹೆಚ್ಚುದಿನಗಳವರೆಗೆ ನೀರನ್ನು ಸಂಗ್ರಹಿಸಬಾರದು ಎಂದು ಜನರಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಆರೋಗ್ಯ ಅಧಿಕಾರಿಗಳಾದ ಡಾ.ಅಬ್ದುಲ್ಲಾ, ಡಾ.ಕರುಣ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದಶರ್ಿ ಎಂ.ಎ.ಷಕೀಬ್, ಸೀನಿಯರ್ ಲ್ಯಾಬ್ ಟೆಕ್ನೀಶಿಯನ್ ನಂದಾರೆಡ್ಡಿ, ಶಶಿಧರ್ ಮೂತರ್ಿ, ಜಿಲ್ಲಾ ಕನ್ಸಲ್ಟಟೆಂಟ್ ಶಿಕ್ಷಾಣಾಧಿಕಾರಿ ಪ್ರತಾಪ್, ಸಂಯೋಜಕರಾದ ನಿಸಾರ್ ಅಹಮ್ಮದ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಆಶಾ ಕಾರ್ಯಕತರ್ೆಯರು, ಆರೋಗ್ಯ ಸಹಾಯಕರು ಹಾಗೂ ರೆಡ್ಕ್ರಾಸ್ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 