ಜಾಮೀನು ಲಭಿಸಿದರೂ, ನೌಹಿರಾ ಶೇಖ್ ಗೆ ತಪ್ಪದ ಜೈಲು ವಾಸ
ಹೈದರಾಬಾದ್, ಜ ೧೮, ಹೀರಾ ಗ್ರೂಪ್ ಠೇವಣಿದಾರರ ಹಗರಣದಲ್ಲಿ ಹೈದ್ರಾಬಾದ್ ಪ್ರಕರಣದಲ್ಲಿ ನೌಹೀರಾ ಶೇಖ್ಗೆ ಜಾಮೀನು ಲಭಿಸಿದ್ದರೂ, ಜೈಲು ವಾಸದಿಂದ ವಿಮುಕ್ತಿ ದೊರಕಿಲ್ಲ ನಾಂಪಲ್ಲಿ ನ್ಯಾಯಾಲಯ ಜಾಮೀನು ಆದೇಶ ಮಂಜೂರು ಮಾಡಿದ ದಿನವೇ ಆಕೆಯನ್ನು ಮುಂಬೈ ಪೊಲೀಸರು ಬಂಧಿಸಿ ಆಕೆಯನ್ನು ಅಲ್ಲಿಗೆ ಕರೆದೊಯ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.ಜಾಮೀನಿನ ಮೇಲೆ ಬಿಡುಗಡೆಗೆ ಅಕೆಯ ಪರ ವಕೀಲರು ಪ್ರಯತ್ನ ನಡೆಸಿದ್ದಾರೆ. ಈ ತಿಂಗಳ ಕೊನೆಯಲ್ಲಿ ಆಕೆ ಬಿಡುಗಡೆಗೊಳ್ಳುವ ಸಾಧ್ಯತೆಯಿದೆ ಎಂದು ವಕೀಲರು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲೂ ಕೂಡ ಠೇವಣಿದಾರರನ್ನು ವಂಚಿಸಿದ ಆರೋಪ ನೌಹೀರಾ ಎದುರಿಸುತ್ತಿದ್ದಾರೆ. ನೌಹೀರಾ ಸಲ್ಲಿಸಿರುವ ಹೊಸ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂಬೈ ಹೈಕೋರ್ಟ್ ಈ ತಿಂಗಳ ೨೯ ಕ್ಕೆ ಮುಂದೂಡಿದೆ. ಜಾಮೀನು ನೀಡಿದರೆ ಸಂತ್ರಸ್ತ ಠೇವಣಿದಾರರ ಹಣ ವಾಪಸ್ಸು ನೀಡಲು ಕ್ರಮ ಕೈಗೊಳ್ಳುವುದಾಗಿ ನೌಹೀರಾ ಭರವಸೆ ನೀಡಿದರೂ ನ್ಯಾಯಾಲಯಕ್ಕೆ ಅದನ್ನು ಮನವರಿಕೆ ಮಾಡುವಲ್ಲಿ ಆಕೆ ವಿಫಲವಾಗಿದ್ದಾರೆ ಎಂದು ವರದಿಯಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 