ಮತ್ತೊಮ್ಮೆ ಮೋದಿ ಹೊಗಳಿದ ಜಿ ಟಿ ದೇವೇಗೌಡ, ಬಿಜೆಪಿ ಪರ ತಮಗೆ ಒಲವಿಲ್ಲ
ಮೈಸೂರು, ಆ 30 ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಜಿ ಟಿ ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಮುಕ್ತಕಂಠದಿಂದ ಶ್ಲಾಘಿಸಿದ್ದು, ಮೋದಿ ಅಂತಹ ನಾಯಕರು ದೇಶಕ್ಕೆ ಅಗತ್ಯ ಎಂದು ಹೇಳಿದ್ದಾರೆ.
ನರೇಂದ್ರ ಮೋದಿ, ದೇಶದ ಅಭಿವೃದ್ಧಿ ಬಗ್ಗೆ ಆಳವಾದ ಚಿಂತನೆ ಹೊಂದಿದ್ದಾರೆ. ಇಂತಹವರು ದೇಶಕ್ಕೆ ಅಗತ್ಯವಿದೆ. ದೇಶ ಮೊದಲು ಎನ್ನುವ ಅವರ ಪರಿಕಲ್ಪನೆ ತಮಗೆ ಇಷ್ಟ ಎಂದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ದೇಶ ಮೊದಲು, ನಂತರ ಬೇರೆ ಎಂಬ ಭಾವನೆ ಹೊಂದಿದ್ದಾರೆ. ಅವರ ದೇಶಾಭಿಮಾನ ತಮಗೆ ಇಷ್ಟ ಎಂದರು.
ಮೋದಿ ಅವರನ್ನು ಹೊಗಳಿದ ಮಾತ್ರಕ್ಕೆ ತಾವು ಬಿಜೆಪಿ ಪರ ಒಲವು ಹೊಂದಿದ್ದೇನೆ ಎಂದು ಭಾವಿಸುವುದು ಬೇಡ. ತಾವು ಜೆಡಿಎಸ್ನಲ್ಲೇ ಇರುವುದಾಗಿ ಸ್ಪಷ್ಟನೆ ನೀಡಿದರು.
ಸುಪ್ರಸಿದ್ಧ ಮೈಸೂರು ದಸರಾ ಉತ್ಸವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರಿಗೆ ದಸರಾ ಆಚರಣೆ ಕುರಿತಂತೆ ತಾವು ಸೂಕ್ತ ಸಲಹೆ ನೀಡಿರುವುದಾಗಿ ಜಿ.ಟಿ. ದೇವೇಗೌಡ ತಿಳಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 