ಧಮ್ಕಿ ಹಾಕಿ ನಾಲ್ಕು ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಬೆಂಗಳೂರು, ನ.12 : ವ್ಯಕ್ತಿಯೋರ್ವನಿಗೆ ಕರೆ ಮಾಡಿ ಧಮ್ಕಿ ಹಾಕಿದ ಬಳಿಕ 4 ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬಾಗಲ್ ಗುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿ.ಟಿ. ಶ್ರೀನಿವಾಸ್ ಎಂಬುವವರಿಗೆ ಸೇರಿದ ವಾಹನಗಳು ಇವಾಗಿದ್ದು, ಕೃತ್ಯ ಎಸಗುವ ಮೊದಲು ಕಿಡಿಗೇಡಿಗಳು, ಶ್ರೀನಿವಾಸ್ ಅವರಿಗೆ ಕರೆ ಮಾಡಿ 50 ಲಕ್ಷ ರೂ ಹಣ ನೀಡಬೇಕು, ಇಲ್ಲದಿದ್ದರೇ ವಾಹನಗಳಿಗೆ ಬೆಂಕಿ ಹಚ್ಚುವುದಾಗಿ ಧಮ್ಕಿ ಹಾಕಿದ್ದರು ಎಂದು ತಿಳಿದು ಬಂದಿದೆ. ಆದರೆ, ಹಣ ನೀಡುವುದಕ್ಕೆ ಬಿ.ಟಿ. ಶ್ರೀನಿವಾಸ್ ಅವರು ಒಪ್ಪದಿದ್ದಕ್ಕೆ ಆಕ್ರೋಶಗೊಂಡ ಕಿಡಿಗೇಡಿಗಳು ಪೆಟ್ರೋಲ್ ಸುರಿದು ನಾಲ್ಕು ವಾಹನಗಳಿಗೆ ಬೆಂಕಿ ಹಚ್ಚಿ, ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 