ಧರ್ಮಸ್ಥಳ ಪ್ರಕರಣ : ತಪ್ಪಿಸ್ಥರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯ
Dharmasthala case: Demand for legal action against the culprits
ಧರ್ಮಸ್ಥಳ ಪ್ರಕರಣ : ತಪ್ಪಿಸ್ಥರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯ
ಹೂವಿನಹಡಗಲಿ ಆ.1- ಧರ್ಮಸ್ಥಳ ಸುತ್ತಮುತ್ತ ನಡೆದಿವೆ ಎನ್ನಲಾದ ಅತ್ಯಾಚಾರ, ಅನಾಚಾರ, ಕೊಲೆ, ದಬ್ಬಾಳಿಕೆ ಪ್ರಕರಣಗಳನ್ನು ಯಾವ ಪ್ರಭಾವಕ್ಕೂ ಒಳಗಾಗದೇ ಪಾರದರ್ಶಕತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಎಐಟಿಯುಸಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಅಗ್ರಹಿಸಿದರು.ಪಟ್ಟಣದ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಲ್ಲಿ ಸಂಘದ ಪದಾಧಿಕಾರಿಗಳುನಡೆಸಿ, ಇತ್ತೀಚೆಗೆ ಪ್ರತಿಭಟನೆ ತಹಶೀಲ್ದಾರ್ ಜಿ. ಸಂತೋಷಕುಮಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಧರ್ಮಸ್ಥಳ ಸುತ್ತಮುತ್ತ ನಡೆದಿವೆ ಎನ್ನಲಾದ ಅಪರಾಧ ಪ್ರಕರಣಗಳನ್ನು ವಿಶೇಷ ತನಿಖಾ ತಂಡ ಪಾರದರ್ಶ-ಕವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.ಸಂಘಟನೆಯ ಬಸವರಾಜ ಸಂಶಿ, ಜಂಗ್ಲಿಸಾಬ್, ರೈತ ಸಂಘದ ಅಧ್ಯಕ್ಷ ಎಚ್. ಸಿದ್ದಪ್ಪ, ಕಾರ್ಯದರ್ಶಿ ಎಂ.ಶಿವರಾಜ್, ಮಲ್ಲಿಕಾರ್ಜುನ,ಬಸವರಾಜ. ಫಕ್ಕೀರ್ಪ. ಸುಭಾನ್.ಬಾಲಗಂಗಾಧರ ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 