ಧೋನಿಗಾಗಿ 2011ರ ವಿಶ್ವಕಪ್ ಫೈನಲ್ನಲ್ಲಿ 2 ಬಾರಿ ಟಾಸ್: ಸಂಗಕ್ಕಾರ
ನವದೆಹಲಿ, ಮೇ 29,ಟೀಮ್ ಇಂಡಿಯಾ 2011ರ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸುವ ಮೂಲಕ 28 ವರ್ಷಗಳ ಸುದೀರ್ಘಾವಧಿಯ ನಂತರ ಏಕದಿನ ಕ್ರಿಕೆಟ್ನ ವಿಶ್ವ ಚಾಂಪಿಯನ್ಸ್ ಪಟ್ಟ ಅಲಂಕರಿಸಿತ್ತು.ಅಂದಹಾಗೆ ಆ ಪಂದ್ಯದಲ್ಲಿ 2 ಬಾರಿ ಟಾಸ್ ಮಾಡುವಂತಾದ ಘಟನೆಯನ್ನು ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕಾರ ಇದೀಗ ಸ್ಮರಿಸಿದ್ದಾರೆ. ಭಾರತ ತಂಡದ ಸ್ಟಾರ್ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರ ಇನ್ಸ್ಟಾಗ್ರಾಮ್ ಸರಣಿ ಕಾರ್ಯಕ್ರಮವಾದ 'ರೆಮಿನೀಸ್ ವಿತ್ ಆಷ್' ಕಾರ್ಯಕ್ರಮದಲ್ಲಿ ಮಾತನಾಡಿದ ಸಂಗಕ್ಕಾರ, ಅಂದು ಭಾರತ ತಂಡದ ನಾಯಕ ಧೋನಿ ಅಸಮಾಧಾನಗೊಂಡ ಕಾರಣ 2 ಬಾರಿ ಟಾಸ್ ಮಾಡಲಾಗಿತ್ತು ಎಂದಿದ್ದಾರೆ.
"ಅಂದು ಕ್ರೀಡಾಂಗಣದಲ್ಲಿ ಜನ ಸಾಗರವೇ ರೇತಿತ್ತು. ಶ್ರೀಲಂಕಾದಲ್ಲಿ ಇಷ್ಟು ಪ್ರೇಕ್ಷಕರು ಇರುವುದಿಲ್ಲ. ಈ ಮೊದಲು ಈಡನ್ ಗಾರ್ಡನ್ಸ್ನಲ್ಲಿ ಇಂಥದ್ದೊಂದು ಅನುಭವವಾಗಿತ್ತು. ಮೊದಲ ಸ್ಲಿಪ್ನಲ್ಲಿದ್ದ ಫೀಲ್ಡರ್ ಬಳಿ ಮಾತನಾಡುವುದು ಕೂಡ ಕಷ್ಟವಾಗುತ್ತಿತ್ತು. ಅಷ್ಟು ಜನ ಸೇರಿದ್ದರು. ನಂತರ ವಾಂಖೆಡೆಯಲ್ಲಿ ಅಷ್ಟು ಪ್ರೇಕ್ಷಕರನ್ನು ಕಂಡೆ," ಎಂದು ಸಂಗಕ್ಕಾರ ಹೇಳಿದ್ದಾರೆ."ಅಂದಿನ ಟಾಸ್ ಈಗಲೂ ನೆನಪಿದೆ. ಮಾಹಿ ನೀವು ಟೇಲ್ ಎಂದಿದ್ದು ಅಲ್ಲವೆ ಅಂದರು. ನಾನು ಇಲ್ಲ ಹೆಡ್ಸ್ ಎಂದು ಹೇಳಿದೆ. ಮ್ಯಾಚ್ ರೆಫ್ರಿ ನಾನು ಟಾಸ್ ಗೆದ್ದಿದ್ದೇನೆ ಎಂದರು. ಮಾಹಿ ತಮಗೆ ಕೇಳಿಸಲಿಲ್ಲ ಎಂದರು. ಆಗ ಕೊಂಚ ಗೊಂದಲ ಸೃಷ್ಟಿಯಾಗಿತ್ತು. ಇದಕ್ಕೆ ಮಾಹಿ ಮತ್ತೊಮ್ಮೆ ಟಾಸ್ ಮಾಡೋಣ ಎಂದರು. ಮತ್ತೊಮ್ಮೆ ಹೆಡ್ಸ್ ಬಿದ್ದು ಟಾಸ್ ನಮ್ಮದಾಯಿತು," ಎಂದು ಲಂಕಾದ ದಿಗ್ಗಜ ವಿಕೆಟ್ಕೀಪರ್ ಬ್ಯಾಟ್ಸ್ಮನ್ ತಮ್ಮ ನೆನಪಿನಾಳ ಕೆದಕಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 