ಈ ದಿನ ಬರುವುದೆಂದು ನಿರೀಕ್ಷಿಸಿರಲಿಲ್ಲ: ಪೇಜಾವರ ಶ್ರೀ
ಉಡುಪಿ, ನ : ನನ್ನ ಜೀವನದಲ್ಲಿ ಈ ದಿನ ಬರಲಿದೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ಮಾತನಾಡಿದ ಶ್ರೀಗಳು, ನನ್ನ ಜೀವನದಲ್ಲಿ ಈ ದಿನ ಬರಲಿದೆ ಎಂದು ನಿರೀಕ್ಷಿಸಿರಲಿಲ್ಲ. ಬಹಳ ವಯಸ್ಸಾಗಿರುವುದರಿಂದ ರಾಮಮಂದಿರದ ಆಸೆ ಕಳೆದುಕೊಂಡಿದ್ದೆ. ಬಹಳ ನಿರೀಕ್ಷೆಯಿಂದ ಈ ತೀರ್ಪನ್ನು ಎದುರು ನೋಡುತ್ತಿದ್ದೇನೆ. ರಾಮಮಂದಿರ ಇಡೀ ದೇಶದ ಜನರ ಕನಸು, ರಾಮ ಮಂದಿರದ ಸ್ವಲ್ಪ ದೂರದಲ್ಲಿ ಮಸೀದಿ ಕೂಡ ನಿಮರ್ಾಣವಾಗಲಿ ಎಂದು ಆಶಿಸುತ್ತೇನೆ. ಇಂದಿನ ತೀಪು ಯಾರ ಪರ, ವಿರುದ್ಧವಾದರೂ ಸೌಹಾರ್ದತೆ ಮುಖ್ಯ. ಇಲ್ಲಿ ಸಂವಿಧಾನಕ್ಕೆ ಭಂಗವಾಗಬಾರದು ಎಂದರು. ಕಾನೂನು ಹಾಗೂ ನ್ಯಾಯಾಲದ ವಿರುದ್ಧ ವರ್ತನೆ ಬೇಡ ಎಂದು ಶ್ರೀಗಳು ವಿನಂತಿಸಿದರು. ರಾಜ್ಯದಲ್ಲಿ ಸಂಘರ್ಷ ಉದ್ಭವವಾದರೇ, ಉಪವಾಸ ಕೂರುವುದಾಗಿ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಭಾನುವಾರ ದೆಹಲಿಯಲ್ಲಿ ನಡೆಯಲಿರುವ ಸಂತರ ಶಾಂತಿಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಮಾಹಿತಿ ನೀಡಿದ ಅವರು, ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುವ ಆಲೋಚನೆ ಹೊಂದಿದ್ದೇನೆ ಎಂದು ತಿಳಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 