ನೆರೆಪೀಡಿತ ಪ್ರದೇಶಗಳ ರಕ್ಷಣಾ ಕಾರ್ಯದಲ್ಲಿ ತೊಡಗುವಂತೆ ಕಾರ್ಯಕರ್ತರಿಗೆ ಸೂಚನೆ : ದಿನೇಶ್ ಗುಂಡೂರಾವ್
ಬೆಂಗಳೂರು, ಆ 8 ರಾಜ್ಯದ ವಿವಿದೆಡೆ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಪ್ರವಾಹಪೀಡಿತ ಜಿಲ್ಲೆಗಳ ಜನರ ರಕ್ಷಣೆಗೆ ಪಕ್ಷದ ಕಾರ್ಯಕರ್ತರು ನೆರವಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ ರಾಜ್ಯದ 15 ಜಿಲ್ಲೆಗಳಲ್ಲಿ ನೆರೆ ಉಂಟಾದ ಪರಿಣಾಮ ಹಳ್ಳಿಗಳು ಮುಳುಗಿವೆ, ರಸ್ತೆಗಳ ಸಂಪರ್ಕ ಕಡಿತಗೊಂಡಿವೆ. ರೈತರು, ಜಾನುವಾರುಗಳು ಸಂಕಷ್ಟದಲ್ಲಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇಂತಹ ಸಂದರ್ಭದಲ್ಲಿ ಸಂಕಷ್ಟದಲ್ಲಿರುವವರ ಸಹಾಯಕ್ಕೆ ಧಾವಿಸುವುದು ನಮ್ಮೆಲ್ಲರ ಜವಾಬ್ದಾರಿ. ಪಕ್ಷದ ಕಾರ್ಯಕರ್ತರು ನೆರೆಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯಗಳಲ್ಲಿ ತೊಡಗುವಂತೆ ಅವರು ಟ್ವೀಟ್ ಮಾಡಿದ್ದಾರೆ ಈಗಾಗಲೇ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಹೆಚ್. ಕೆ. ಪಾಟೀಲ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ನೇತೃತ್ವದಲ್ಲಿ ನೆರೆಪೀಡಿತ ಪ್ರದೇಶಗಳ ವೀಕ್ಷಣೆಗೆ ಎರಡು ತಂಡ ರಚಿಸಲಾಗಿದ್ದು, ಶುಕ್ರವಾರದಿಂದ ಈ ತಂಡಗಳು ಪ್ರವಾಸ ಆರಂಭಿಸಲಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 