ಅಂಗವಿಕಲತೆ ಎಂಬುದು ಶಾಪವಲ್ಲ: ಗಲಗಲಿ
Disability is not a curse: Galagali
ರನ್ನ ಬೆಳಗಲಿ 03: ಪಟ್ಟಣದ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರದಂದು ಅಂತರಾಷ್ಟ್ರೀಯ ಅಂಗವಿಕಲರ ದಿನಾಚರಣೆ ಕಾರ್ಯಕ್ರಮ ಜರಗಿತು. ಮುಖ್ಯಶಿಕ್ಷಕ ಆರ್ ಡಿ ಗಲಗಲಿ ಅಂಗವಿಕಲತೆ ಎಂಬುದು ಶಾಪವಲ್ಲ. ಎಲ್ಲರಂತೆ ಅವರು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಪ್ರೋತ್ಸಾಹಿಸುವುದೇ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಅದೆಷ್ಟೋ ಅಂಗವಿಕಲರು ಅಂಗವೈಕಲ್ಯತೆಯನ್ನು ಮೀರಿ ಬೆಳೆದು, ಸರ್ವರಿಗೂ ಸ್ಪೂರ್ತಿಯಾಗಿದ್ದಾರೆ ಎಂದು ತಿಳಿಸಿದರು.
ಯಮನಪ್ಪ ಆಲಗೂರ ಎಸ್ ಡಿ ಎಂ ಸಿ ಅಧ್ಯಕ್ಷರು ಶಾಲೆಯ ವಿಶೇಷ ಆದ್ಯತೆಯುಳ್ಳ ವಿದ್ಯಾರ್ಥಿನಿ ಐಶ್ವರ್ಯ ಮೂಲಿಮನೆಗೆ ಸನ್ಮಾನಿಸಿ ಗ್ರಂಥ ಉಡುಗೊರೆಯನ್ನು ನೀಡಿದರು.ಎಸ್ ಹೆಚ್ ಮಾದರ, ಎಸ್ ಪಿ ಜೋಶಿ, ಆರ್ ಡಿ ಬಂಡಿ, ಎಚ್ ಬಿ ಜಮಾದಾರ, ರೂಪಾ ದಂಡಿನ, ರಾಘವೇಂದ್ರ ನೀಲನ್ನವರ, ಶೋಭಾ ವೀರಘಂಟಿ, ಭಾರತಿ ಮಳ್ಳಿಗೇರಿ, ಕಾಳಮ್ಮ ಬಡಿಗೇರ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 