ಬೀಜೋಪಚಾರದಿಂದ ರೋಗ ಮುಕ್ತ ಬೆಳೆ
ಬೆಳಗಾವಿ, 30: ರೈತರು ಬಿತ್ತನೆ ಬೀಜಕ್ಕೆ ರೋಗ ನಾಶಕ ಹಾಗೂ ಜೈವಿಕ ಪರಿಕರಗಳಿಂದ ಬೀಜೋಪಚಾರ ಮಾಡಿ ಬಿತ್ತನೆ ಮಾಡಿದರೆ ಮಣ್ಣಿನಿಂದ ಹಾಗೂ ಬೀಜದಿಂದ ಬರುವ ಅನೇಕ ಬಗೆಯ ರೋಗಗಳನ್ನು ತಡೆಗಟ್ಟಬಹುದು ಎಂದು ಬೆಳಗಾವಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳಾದ ವಜ್ರೇಶ್ವರಿ ಕುಲಕಣರ್ಿ ತಿಳಿಸಿದರು.
ಇತ್ತೀಚೆಗೆ ತಾಲೂಕಿನ ಅವಚಾರಟ್ಟಿ ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ ಏರ್ಪಡಿಸಿದ ಬೀಜೋಪಚಾರ ಆಂದೋಲನ ಹಾಗೂ ಸುರಕ್ಷಿತ ಕೀಟನಾಶಕ ಬಳಕೆ ಕುರಿತ ತರಬೇತಿಯಲ್ಲಿ ರೈತರಿಗೆ ಮಾಹಿತಿ ನೀಡುತ್ತ ತಾಲೂಕಿನಲ್ಲಿ ಭತ್ತ ಹಾಗೂ ಸೋಯಾಅವರೆ ಬಿತ್ತನೆಗಾಗಿ ರೈತರು ಭೂಮಿ ಸಿದ್ದಪಡಿಸಿಕೊಂಡಿದ್ದು, ಉತ್ತಮ ಮಳೆಗಾಗಿ ಕಾಯುತ್ತಿದ್ದಾರೆ ಎಂದರು.
ಬಿತ್ತನೆಗೆ ಮೊದಲು ಬೀಜವನ್ನು ಕೆಲವು ರಸಾಯನಿಕ ಹಾಗೂ ಜೈವಿಕ ರೋಗನಾಶಕವಾದ ಟ್ರೈಕೋಡಮರ್ಾಗಳಿಂದ ಉಪಚರಿಸಿ ಬಿತ್ತಿದರೆ ಸಸಿ ಕೊಳೆ ಬುಡ ಕೊಳೆ, ಸಿಡಿ ರೋಗ ಇತ್ಯಾದಿಗಳಿಂದ ಬೆಳೆಯನ್ನು ರಕ್ಷಿಸಿ ಉತ್ತಮ ಇಳುವರಿ ಪಡೆಯಬಹುದಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸೋಯಾಅವರೆ ಹಾಗೂ ಭತ್ತದ ಬೀಜಕ್ಕೆ ಬೀಜೋಪಚಾರ ಮಾಡುವ ವಿಧಾನವನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಡಲಾಯಿತು. ಇಂಡೋಫಿಲ್ ಸಂಸ್ಥೆಯಲ್ಲಿ ತಜ್ಞರಾದ ಮಂಜೇಗೌಡ ಅವರು ಪ್ರಾತ್ಯಕ್ಷಿಕೆ ಮಾಡಿ ತೋರಿಸಿದರು.
ಕೃಷಿ ಇಲಾಖೆ ಬೆಳಗಾವಿಯ ತಾಂತ್ರಿಕ ವ್ಯವಸ್ಥಾಪಕರಾದ ರಾಜಶೇಖರ ಭಟ್ಟ ಅವರು ಕೀಟನಾಶಕಗಳನ್ನು ಸುರಕ್ಷಿತವಾಗಿ ಬಳಕೆ ಮಾಡುವ ನಿಟ್ಟಿನಲ್ಲಿ ರೈತರು ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ತರಬೇತಿ ನಡೆಸಿಕೊಟ್ಟರು.
ಸಹಾಯಕ ಕೃಷಿ ನಿದರ್ೇಶಕರಾದ ಜಿ ಬಿ ಕಲ್ಯಾಣಿ ಅವರು ತಾಂತ್ರಿಕ ಮಾರ್ಗದರ್ಶನ ನೀಡಿದರು. ಅಧಿಕಾರಿಗಳಾದ ಪಿ ಎಸ್ ಪಾಂಡ್ರೆ, ಗ್ರಾಮದ ಹಿರಿಯ ರೈತರಾದ ವಿಠ್ಠಲ ಕುರಂಗಿ ಹಾಗೂ ಇತರರು ಹಾಜರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 