ಸಮಾಜಕ್ಕೆ ಜಂಗಮ ಸಮಾಜದ ಕೊಡುಗೆ ಅಪಾರ: ಸಂಸದ ಸಂಗಣ್ಣ
ಲೋಕದರ್ಶನ ವರದಿ
ಕೊಪ್ಪಳ 10: ಸಮಾಜದಲ್ಲಿ ಜಂಗಮ ಸಮಾಜ ಎಲ್ಲಾ ಸಮಾಜಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಹೋಗುವ ಸಮಾಜ, ಸಮುದಾಯದಲ್ಲಿ ಜಂಗಮ ಸಮುದಾಯದ ಕೊಡುಗೆ ಅಪಾರ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ಅವರು ನಗರದ ವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದ ಮರಿಸ್ವಾಮಿ ಬಡಾವಣೆಯ ಶ್ರೀ ರೇಣುಕಾಚಾರ್ಯ ಮಂದಿರದಲ್ಲಿ 46ನೇ ಮಾಸಿಕ ಅರಿವು-ಆಚಾರ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ ಜಂಗಮ ಸಮಾಜ ದಾಸೋಹ-ಜ್ಞಾನ ದಾಸೋಹ ಸಂಸ್ಕೃತಿಯನ್ನು ಹಲವಾರು ವರ್ಷಗಳಿಂದ ನಡೆಸಿಕೊಂಡು ಬಂದಿದೆ ಅದಕ್ಕೆ ಈಗಿನ ವೀರಶೈವ ಮಠಮಾನ್ಯಗಳೇ ಸಾಕ್ಷಿಯಾಗಿದೆ, ಇಂದು ಎಲ್ಲಾ ಸಮಾಜ ಶೈಕ್ಷಣೀಕವಂತರಾಗಬೇಕು ಅಂದಾಗ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.
ಸಾನಿಧ್ಯವನ್ನು ಹೆಬ್ಬಾಳ ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು, ಮೈನಳ್ಳಿ-ಬಿಕನಳ್ಳಿ ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಸದಸ್ಯ ನಾಗಭೂಷಣ ಆರ್.ಸಾಲಿಮಠ ಹಾಗೂ ಪಿಕಾರ್ಡ್ ಬ್ಯಾಂಕ್ ನೂತನ ನಾಮನಿದರ್ೇಶನ ಸದಸ್ಯ ಗವಿಸಿದ್ದಯ್ಯ ಸಸಿಮಠ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಬಸವರಾಜ್ ದಡೇಸೂಗೂರು, ಮಾಜಿ ಶಾಸಕ ಜಿ.ವೀರಪ್ಪ,ಶ್ರೀ ವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರುದ್ರಯ್ಯ ವಕೀಲರು, ಸಂಸದ ಸಂಗಣ್ಣ ಕರಡಿ ಧರ್ಮಪತ್ನಿ ನಿಂಗಮ್ಮ ಸಂಗಣ್ಣ ಕರಡಿ, ಸಿಸಿಐಎಂ ಸದಸ್ಯರಾದ ಡಾ.ಕುಮಾರಸ್ವಾಮಿ ಬಿ.ಹಿರೇಮಠ, ಸಮಾಜದ ಮುಖಂಡರಾದ ಸಿ.ವಿ.ಕಲ್ಮಠ, ವೀರಯ್ಯಸ್ವಾಮಿ ಬೊಮ್ಮನಾಳ, ವಿ.ಎಂ.ಭೂಸನೂರಮಠ ವಕೀಲರು, ಬಾಲಚಂದ್ರಯ್ಯ, ಕೊಟ್ರಬಸಯ್ಯ ಗಿಣಿಗೇರ ಸೇರಿದಂತೆ ಮತ್ತೀತರರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 