ಗಣಿನಾಡು ಬಳ್ಳಾರಿ ಜಿಲ್ಲೆಗೆ ಸಂಕಷ್ಟ
ಬಳ್ಳಾರಿ ೧೩: ರಾಜ್ಯದ ರಾಜಧಾನಿ ಬೆಂಗಳೂರಿಗೆ ಕೂಲಿ ಅರಸಿ ತೆರಳಿದ್ದ ಕೂಲಿಕಾಮರ್ಿಕರಿಂದಲೂ ಗಣಿನಾಡು ಬಳ್ಳಾರಿ ಜಿಲ್ಲೆಗೆ ಸಂಕಷ್ಟ ಎದುರಾಗಿದೆ. ಜಿಲ್ಲೆಯ ಕಂಪ್ಲಿ ತಾಲೂಕಿನ ಕಾಮರ್ಿಕರೊಬ್ಬರಲ್ಲಿ ಕಂಡು ಬಂದ ಕೊರೊನಾ ಸೋಂಕು ಇದಕ್ಕೆ ತಾಜಾ ಉದಾಹರಣೆಯಾಗಿದೆ.
ಬೆಂಗಳೂರಿನಿಂದ ಬಳ್ಳಾರಿ ಜಿಲ್ಲೆಗೆ ಬಂದ ಕಾಮರ್ಿಕನಲ್ಲಿ ಈಗ ಕೊರೊನಾ ಸೋಂಕು ದೃಢವಾಗಿದೆ. ಜಿಲ್ಲೆಯ ಕಂಪ್ಲಿ ಪಟ್ಟಣದ 37 ವರ್ಷದ ಕಟ್ಟಡ ಕಾಮರ್ಿಕನಲ್ಲಿ ಈ ಸೋಂಕು ಇರೋದು ದೃಢವಾಗಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದ ಈ ವ್ಯಕ್ತಿ ಮೇ 5ರಂದು ಬೆಂಗಳೂರಿನಿಂದ ಸಕರ್ಾರಿ ಬಸ್ನಲ್ಲಿ ತನ್ನ ಪತ್ನಿ ಹಾಗೂ ಎರಡು ಮಕ್ಕಳ ಜೊತೆಯಲ್ಲಿ ಮೊದಲು ಗಂಗಾವತಿಗೆ ಬಂದಿದ್ದಾನೆ.
ಗಂಗಾವತಿಯಿಂದ ಆಟೋರಿಕ್ಷಾ ಒಂದರಲ್ಲಿ ಕಂಪ್ಲಿಗೆ ಬಂದಿದ್ದಾನೆ. ಕಳೆದ ಎರಡು ದಿನಗಳ ಹಿಂದೆ ಸೋಂಕಿನ ಗುಣ ಲಕ್ಷಣಗಳು ಕಂಡ ಬಂದ ಹಿನ್ನೆಲೆಯಲ್ಲಿ ರಕ್ತ ಮತ್ತು ಗಂಟಲು ದ್ರವ ಪರೀಕ್ಷೆ ನಡೆಸಲಾಗಿ ಕೊರೊನಾ ಇರುವುದು ದೃಢವಾಗಿದೆ.
ಗುಳೆ ಹೋದ ಕಾಮರ್ಿಕರಿಂದ ಕುತ್ತು : ಕೂಲಿ ಅರಸಿ ಬೆಂಗಳೂರಿಗೆ ಹೋಗಿ ವಾಪಸ್ ಆದ ಕೂಲಿ ಕಾಮರ್ಿಕರಿಂದಲೂ ರಾಜ್ಯದ ನಾನಾ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಕೆಎಸ್ಆರ್ಟಿಸಿ ಬಸ್ನಲ್ಲಿ ತಮ್ಮ ತಮ್ಮ ಊರುಗಳಿಗೆ ವಾಪಸ್ ಆದ ಕೂಲಿ ಕಾಮರ್ಿಕರಿಂದ ಇದೀಗ ಒಂದೊಂದೇ ಪ್ರಕರಣ ಪಾಸಿಟಿವ್ ಬರುತ್ತಿವೆ. ಹೀಗಾಗಿ ಬೆಂಗಳೂರಿನಿಂದ ಬಂದ ವಲಸೆ ಕಾಮರ್ಿಕರನ್ನು ಹುಡುಕಿ ಕ್ಯಾರಂಟೈನ್ ಮಾಡುವುದು ಅನಿವಾರ್ಯವಾಗಿದೆ.
ಈ ಸೋಂಕಿತ ವ್ಯಕ್ತಿ ಪ್ರಯಾಣಿಸಿದ ಬಸ್ನಲ್ಲಿದ್ದ 32ಕ್ಕೂ ಹೆಚ್ಚು ಪ್ರಯಾಣಿಕರ ಹುಡುಕಾಟ ಆರಂಭವಾಗಿದೆ. ಅಲ್ಲದೇ ಈತನನ್ನು ಗಂಗಾವತಿಯಿಂದ ಕಂಪ್ಲಿಗೆ ಕರೆತಂದ ಆಟೋ ಚಾಲಕನಿಗಾಗಿ ಹುಡುಕಾಟ ಕೂಡ ನಡೆಸಲಾಗುತ್ತಿದೆ
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 