ಕೃಷಿ ಸಚಿವರಿಂದ ಹಿರೇಕೆರೂರಿನಲ್ಲಿ ಬಡವರಿಗೆ ಉಚಿತ ಹಾಲು ವಿತರಣೆ
ಹಾವೇರಿ, ಏ. 4, ಲಾಕ್ಡೌನ್ನಿಂದಾಗಿ ಜನರಿಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಹಾಗೂ ಜನತೆಯ ಆರೋಗ್ಯದ ದೃಷ್ಟಿಯಿಂದ ರಾಜ್ಯ ಸರ್ಕಾರ ಉಚಿತ ಹಾಲನ್ನು ವಿತರಿಸುವ ಯೋಜನೆ ಜಾರಿಗೆ ತಂದಿದ್ದು, ಕೃಷಿ ಸಚಿವ ಹಾಗೂ ಹಿರೇಕೆರೂರು ಮತಕ್ಷೇತ್ರದ ಶಾಸಕರೂ ಆಗಿರುವ ಬಿ.ಸಿ.ಪಾಟೀಲ್ ಕ್ಷೇತ್ರದ ಬಡ ಜನರಿಗೆ ಇಂದು ಹಾಲು ವಿತರಿಸಿದರು.ಈ ವೇಳೆ ಮಾತನಾಡಿದ ಸಚಿವರು, ಯಡಿಯೂರಪ್ಪ ನೇತೃತ್ವದ ಸರ್ಕಾರ ಬಡ ಜನರಿಗೆ ಹಾಲು ಒಕ್ಕೂಟದಲ್ಲಿ ಹೆಚ್ಚಿವರಿಯಾಗಿರುವ ಹಾಲನ್ನು ಉಚಿತವಾಗಿ ವಿತರಿಸುವ ದೃಢ ಸಂಕಲ್ಪ ಮಾಡಿದೆ. ಅದರಂತೆ ಕ್ಷೇತ್ರದ ನಗರದ ಬಡವರಿಗೆ ನಾಲ್ಕು ನೂರು ಲೀಟರ್ ಉಚಿತ ಹಾಲನ್ನು ವಿತರಿಸಲಾಗಿದೆ. ಅಲ್ಲದೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕರೆ ನೀಡಿದ ಅವರು, ರೈತರ ಕೃಷಿಕರ ಬಡವರ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು.ಧಾರವಾಡ ಜಿಲ್ಲಾ ಹಾಲು ಒಕ್ಕೂಟದಲ್ಲಿ ಪ್ರತಿದಿನ 19ಸಾವಿರ ಲೀಟರ್ನಷ್ಟು ಹೆಚ್ಚುವರಿ ಹಾಲು ಸಂಗ್ರಹವಾಗುತ್ತಿದೆ. ಈ ಹಾಲನ್ನು ಆಯಾ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ಬರುವ ನಿರಾಶ್ರಿತರು, ಕೊಳಚೆ ಪ್ರದೇಶ ನಿವಾಸಿಗಳು ಮತ್ತು ಕೂಲಿ ಕಾರ್ಮಿಕರಿಗೆ ಕುಟುಂಬವೊಂದಕ್ಕೆ ಪ್ರತಿದಿನ ಒಂದು ಲೀಟರ್ನಂತೆ ಉಚಿತವಾಗಿ ಏಪ್ರಿಲ್ 14ರವರೆಗೆ ವಿತರಿಸಿ ಪೌಷ್ಠಿಕ ಆಹಾರ ನೀಡುವ ಮೂಲಕ ಆಹಾರ ಭದ್ರತೆ ಒದಗಿಸುವುದು ಅತಿಅವಶ್ಯವಾಗಿದೆ ಎಂದರು.ಈ ಸಂದರ್ಭದಲ್ಲಿ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ್ ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು ಭಾಗಿಯಾಗಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 