ಶಾಲಾ ವಿದ್ಯಾರ್ಥಿಗಳಿಗೆ ಅವಶ್ಯ ಸಾಮಗ್ರಿಗಳ ವಿತರಣೆ
Distribution of essential supplies to school students
ಶಾಲಾ ವಿದ್ಯಾರ್ಥಿಗಳಿಗೆ ಅವಶ್ಯ ಸಾಮಗ್ರಿಗಳ ವಿತರಣೆ
ಯರಗಟ್ಟಿ, 04 : ಸಮೀಪದ ಮುನವಳ್ಳಿ ಪಟ್ಟಣದ ಸಮಾಜ ಸೇವಾ ಸಂಸ್ಥೆಯಾದ ಇನ್ನರ್ವ್ಹೀಲ್ ಕ್ಲಬ್ ವತಿಯಿಂದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ಹ್ಯಾಪಿ ಸ್ಕೂಲ್ ಪ್ರೊಜೆಕ್ಟ್ ಹಮ್ಮಿಕೊಳ್ಳಲಾಗಿತ್ತು. ಶಾಲೆಗೆ ಹಾಗೂ ವಿದ್ಯಾರ್ಥಿನಿಯರಿಗೆ ಅವಶ್ಯವಿರುವ ಸಾಮಗ್ರಿಗಳನ್ನು ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಖ್ಯಾತ ವೈದ್ಯರಾದ ಡಾ. ಗೌರಿ ವೆಂಕಟೇಶ ನಾಯ್ಕ ಅವರಿಂದ ವಿದ್ಯಾರ್ಥಿಗಳಿಗೆ ಉತ್ತಮ ಆರೋಗ್ಯ ಮತ್ತು ಶುಚಿತ್ವದ ಕುರಿತು ಮಾರ್ಗದರ್ಶನ ನೀಡಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶಾರದಾ ದ್ಯಾಮನಗೌಡರ, ಸುಷ್ಮಾ ಗೋಮಾಡಿ, ಅಶ್ವಿನಿ ದಶಮನಿ, ವಿಜಯಲಕ್ಷ್ಮೀ ಮುರಂಕರ, ಅನುರಾಧಾ ಬೆಟಗೇರಿ, ಗೌರಿ ಜಾವೂರ, ಸುಮಾ ಯಲಿಗಾರ, ಶೀಲಾ ಕರೀಕಟ್ಟಿ, ಸಹನಾ ನಲವಡೆ, ಉಮಾ ಹಂಪಣ್ಣವರ, ಗೀತಾ ಜಿಡ್ಡಿಮನಿ, ಮುಕ್ತಾ ಪಶುಪತಿಮಠ, ಸುಜಾತಾ ಕೋರಿ, ಲಲಿತಾ ಕಾಮಶೆಟ್ಟಿ, ಪೂಜಾ ಗೋಪಶೆಟ್ಟಿ, ಸುಜಾತಾ ಪಾಟೀಲ, ವೈಷ್ಣವಿ ಶೆಟ್ಟರ, ಶೀತಲ ಗೋಮಾಡಿ, ಪ್ರಗು ಎಸ್.ಎಂ.ಜೋಶಿ, ಶಂಕರ ಹಾವೇರಿ, ಸುಧಾ ಶಾನಭೋಗ, ಶಿಕ್ಷಕರು ಸೇರಿದಂತೆ ಇನ್ನರ್ವ್ಹೀಲ್ ಕ್ಲಬ್ದ ಸದಸ್ಯೆಯರು ಇದ್ದರು. ಇದೇ ಸಂದರ್ಭದಲ್ಲಿ ಡಾ.ಗೌರಿ ವೆಂಕಟೇಶ ನಾಯ್ಕ ಅವರನ್ನು ಸನ್ಮಾನಿಸಲಾಯಿತು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 