ಜಿಲ್ಲಾಡಳಿತದಿಂದ ಮಾಧ್ಯಮ ಪ್ರತಿನಿಧಿಗಳಿಗೆ ಆಹಾರ ಕಿಟ್ ವಿತರಣೆ
ಕಲಬುರಗಿ, ಮೇ 12,ಜಿಲ್ಲಾಡಳಿತದ ಕೋವಿಡ್-19 ಆಹಾರ ಸಮಿತಿ ವತಿಯಿಂದ ಕಲಬುರಗಿ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳು/ಪತ್ರಕರ್ತರಿಗೆ ಜಿಲ್ಲಾಧಿಕಾರಿ ಶರತ್.ಬಿ ಮಂಗಳವಾರ ಆಹಾರ ಕಿಟ್ ಗಳನ್ನು ವಿತರಿಸಿದರು.ಒಟ್ಟು 350 ಕಿಟ್ ಗಳನ್ನು ವಿತರಿಸಲಾಗುತ್ತಿದ್ದು, 10 ಕೆಜಿ ಅಕ್ಕಿ, ಎರಡೂವರೆ ಕೆಜಿ ಗೋಧಿ, 1 ಕೆಜಿ ಬೇಳೆ,1 ಲೀಟರ್ ಎಣ್ಣೆ, ಉಪ್ಪು, ಖಾರ, ಅರಿಶಿಣ, ದನಿಯಾ ಪೌಡರ್, ಬಟ್ಟೆ ಸೋಪು, ಮೈ ಸೋಪು ಮುಂತಾದ ಆಹಾರ ಸಾಮಾಗ್ರಿಗಳು ಈ ಕಿಟ್ನಲ್ಲಿವೆ.ಈ ಸಂದರ್ಭದಲ್ಲಿ ಆಹಾರ ಸಮಿತಿ ಅಧ್ಯಕ್ಷ ಎಚ್ ಕೆ ಆರ್ ಡಿ ಬಿ ಜಂಟಿ ನಿರ್ದೇಶಕ ಪ್ರವೀಣ್ ಪ್ರಿಯಾ ಡೇವಿಡ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಸಿದ್ದೇಶ್ವರ ಪ್ಪ. ಜಿ.ಬಿ, ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಡಾ. ದೀಪಕ್, ಕಲಬುರಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಭವಾನಿ ಸಿಂಗ್, ವೇದಾ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಡಾ. ರವಿ ಎಸ್. ಮಾಲಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 