ಅಂಗನವಾಡಿ ಕೇಂದ್ರಗಳಿಗೆ ಉಚಿತವಾಗಿ ಸೋಪು ಕಿಟ್ ವಿತರಣೆ
ಬ್ಯಾಡಗಿ: ಕೈಗಳ ಸ್ವಚ್ಚತೆಯನ್ನು ಕಾಪಾಡಿಕೊಂಡು ಆಹಾರ ಸೇವನೆ ಮಾಡುವುದರಿಂದ 94 ಕ್ಕೂ ಹೆಚ್ಚು ರೋಗಗಳಿಂದ ದೂರವಿರಬಹುದೆಂದು ತಾಲೂಕಿನ ಕುಮ್ಮೂರ ಗ್ರಾಮದ ಪ್ರಭಾವತಿ ಫಾಸಿ ಸರಕಾರಿ ಪ್ರೌಢ ಶಾಲೆಯಲ್ಲಿ ಗ್ರಾ.ಪಂ. ನಿಧಿಯೊಂದರ ಅನುದಾನದಲ್ಲಿ ಗ್ರಾ.ಪಂ.ವ್ಯಾಪ್ತಿಯ 5 ಶಾಲೆಗಳು ಹಾಗೂ 6 ಅಂಗನವಾಡಿ ಕೇಂದ್ರಗಳಿಗೆ ಉಚಿತವಾಗಿ ಸೋಪುಗಳ ಕಿಟ್ಗಳನ್ನು ವಿತರಿಸಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ನೀಲಪ್ಪ ಕಜ್ಜರಿ ಮಾತನಾಡಿದರು.
ಶಾಲೆ ಹಾಗೂ ಅಂಗನವಾಡಿಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಸಂದರ್ಭದಲ್ಲಿ ಮಕ್ಕಳು ಕೈಗಳನ್ನು ಸ್ವಚ್ಚ ಮಾಡಿಕೊಂಡು ಆಹಾರ ಸೇವಿಸುವ ನಿಟ್ಟಿನಲ್ಲಿ ಅನುಕೂಲತೆಯನ್ನು ಕಲ್ಪಿಸಲು ಗ್ರಾಮ ಪಂಚಾಯತ ವತಿಯಿಂದ ಸೋಪುಗಳನ್ನು ವಿತರಿಸಲು ಸಮಿತಿಯಲ್ಲಿ ತೀಮರ್ಾನಿಸಿದ್ದು, ಪ್ರತಿ 3 ತಿಂಗಳಿಗೊಮ್ಮೆ ಎಲ್ಲಾ ಶಾಲೆ ಹಾಗೂ ಅಂಗನಾಡಿಗಳಿಗೆ ಸೋಪುಗಳನ್ನು ವಿತರಿಸುವುದಾಗಿ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ.ಅಧ್ಯಕ್ಷೆ ಲಲಿತಮ್ಮ ಲಮಾಣಿ ಮಾತನಾಡಿ ಮಕ್ಕಳಿಗೆ ಬಾಲ್ಯಾವಸ್ಥೆಯಲ್ಲಿಯೇ ಸ್ವಚ್ಚತೆಯ ಅರಿವು ಮೂಡಿಸಬೇಕು.
ಅಲ್ಲದೇ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸಹ ಸ್ವಚ್ಚತೆಯಿಂದ ಕಾಪಾಡಿಕೊಳ್ಳಲು ಮುಂದಾಗಬೇಕೆಂದು ಹೇಳಿದರು.
ಸಿಡಿಪಿಓ ರಾಮಲಿಂಗಪ್ಪ ಮಾತನಾಡಿ ಶಾಲಾ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸ್ವಚ್ಚತೆಗೋಸ್ಕರ ಸೋಪುಗಳನ್ನು ವಿತರಿಸುತ್ತಿರುವ ಕುಮ್ಮೂರ ಗ್ರಾ.ಪಂ. ಸಮಿತಿಯ ಕಾರ್ಯವೈಖರಿ ಶ್ಲಾಘನೀಯವೆಂದು ತಮ್ಮ ಮೆಚ್ಚುಗೆ ವ್ಯಕ್ತ ಪಡಿಸಿದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ಬಸವಣ್ಣೆವ್ವ ಮೋಟೆವ್ವನವರ, ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ಅಶೋಕ ಹಿರೇಹಳ್ಳಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಗ್ರಾ.ಪಂ.ಕಾರ್ಯದಶರ್ಿ ವೀರಣ್ಣ ತಳವಾರ ಸ್ವಾಗತಿಸಿದರು. ಎಚ್.ವೆಂಕಟೇಶ ವಂದಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 