ಕಾಗವಾಡ: ಜಾನುವಾರಗಳಿಗೆ ಇಪ್ಪತ್ತು ಟನ್ ಮೇವು ವಿತರಣೆ
ಲೋಕದರ್ಶನ ವರದಿ
ಕಾಗವಾಡ 19: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಕಾಗವಾಡ ತಾಲೂಕಿನ ಉಗಾರ ಸೇರಿದಂತೆ ಇನ್ನೂಳಿದ ಕಾಳಜಿ ಕೇಂದ್ರಗಳಲ್ಲಿ ಸ್ಥಳಾಂತರಿಸಿದ ಜಾನುವಾರಗಳಿಗೆ 20 ಟನ್ ಮೇವು ವಿತರಿಸಲಾಯಿತು.
ಕಾಗವಾಡ ತಾಲೂಕಿಗೆ ಸಿಂದನೂರ ತಾಲೂಕಿನ ವಿರಪಾಪೂರ ಗ್ರಾಮ ಹಾಗೂ ಹಟ್ಟಿ ಗ್ರಾಮಸ್ಥರ ವತಿಯಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸಂಚಾಲಿತ ನೆರೆ ಸಂತ್ರಸ್ತ ಪರಿಹಾರ ಸಮಿತಿ ಅಥಣಿ ಹಾಗೂ ಕಾಗವಾಡ ಇವರಿಂದ 3 ಲಾರಿಗಳಷ್ಟು ಸುಮಾರು 20 ಟನ್ನದಷ್ಟು ಜೋಳ ಹಾಗೂ ಭತ್ತದ ಒಣ ಮೇವುಪೂರೈಸಿದರು.
ಸಂತ್ರಸ್ಥ ಗ್ರಾಮಗಳಾದ ಕೃಷ್ಣಾ-ಕಿತ್ತೂರ, ಬಣಜವಾಡ, ಕಾತ್ರಾಳ, ಐನಾಪೂರ(ಹುನಚಿಕೋಡಿ) ಹಾಗೂ ಉಗಾರ-ಖುರ್ದ ಒಟ್ಟು 16 ಗಂಜಿ ಕೇಂದ್ರಗಳ ಜಾನುವಾರುಗಳಿಗೆ ಪೂರೈಸಲಾಯಿತು ಎಂದು ಆರ್.ಎಸ್.ಎಸ್. ಕಾರ್ಯಕರ್ತ ಅನೀಲ ನಾವಿಲಗೇರ ಹೇಳಿದರು.
ಅವರೊಂದಿಗೆ ಯೋಗೇಶ ಕುಂಬಾರ, ವಿಕಾಸ ಗಿಜವನೆ, ಸಚೀನ ಶಿಂದೆ, ರಮೇಶ ಬೋಗಿ, ಅಜೀತ ಭೋಸಲೆ ಹಾಗೂ ಇನ್ನೂಳಿದ ಎಲ್ಲ ಸಂಘದ ಸದಸ್ಯರು ಮೇವು ಪೂರೈಸಲು ಸಹಕರಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 