ಆಯನೂರು ಮಂಜುನಾಥ್ ನೇತೃತ್ವದಲ್ಲಿ ಕಾರ್ಮಿಕರಿಗೆ ತರಕಾರಿ ವಿತರಣೆ
ಶಿವಮೊಗ್ಗ, ಏ.17, ನಗರದ ಇಂದಿರಾ ಬಡಾವಣೆಯ ಕೂಲಿಕಾರ್ಮಿಕರಿಗೆ ಜನಶಕ್ತಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಮಾಜಿ ಸಂಸದ, ಮೇಲ್ಮನೆ ಸದಸ್ಯರೂ ಆಗಿರುವ ಆಯನೂರು ಮಂಜುನಾಥ್ ನೇತೃತ್ವದಲ್ಲಿ ಉಚಿತ ತರಕಾರಿಗಳನ್ನು ಇಂದು ವಿತರಿಸಲಾಯಿತು. ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು.ಆಯನೂರು ಮಂಜುನಾಥ್ ಮಾತನಾಡಿ, ಲಾಕ್ ಡೌನ್ ಹಿನ್ನೆಲೆಯಲ್ಲಿ ಬಡವರು ಕೂಲಿ ಕಾರ್ಮಿಕರು ಸೇರಿದಂತೆ ಯಾರಿಗೂ ಆಹಾರದ ಕೊರತೆಯಾಗದಂತೆ ಸರ್ಕಾರ ದಿಟ್ಟ ಕ್ರಮಕೈಗೊಂಡಿದೆ. ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾರ್ಮಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚೆತ್ತುಕೊಳ್ಳಲಾಗಿದೆ.
ಉಚಿತ ಪಡಿತರವನ್ನು ಸಹ ವಿತರಿಸಲಾಗುತ್ತಿದೆ. ಕೂಲಿಕಾರ್ಮಿಕರು ಬಡವರಿಗೆ ಸಹಕರಿಸಲು ಸರ್ಕಾರದ ಜೊತೆ ಕೈಜೋಡಿಸುವವರಿಗೆ ಮುಕ್ತ ಅವಕಾಶವಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆ ಸರ್ಕಾರದ ಸೂಚನೆ ನಿರ್ದೇಶನ ಪಾಲಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಜಿ. ಕುಮಾರಸ್ವಾಮಿ, ಜನಶಕ್ತಿ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಪರಂಧಾಮ ರೆಡ್ಡಿ, ಶಲ ರವಿ,ಪ್ರಧಾನ ಕಾರ್ಯದರ್ಶಿ ಪ್ರಕಾಶ, ಜನಶಕ್ತಿ ಕಟ್ಟಡ ಕಾರ್ಮಿಕ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 