ಸುವಿಶೇಷ ಅಪಘಾತ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಭೇಟಿ ಪರಿಶೀಲನೆ
ಬಳ್ಳಾರಿ,ಜು.07: ಪ್ರಧಾನಮಂತ್ರಿ ಸ್ವಸ್ಥ ಸುರಕ್ಷಾ ಯೋಜನೆ ಅಡಿ ಬಳ್ಳಾರಿಯಲ್ಲಿ ನಿಮರ್ಿಸಲಾಗಿರುವ ಸುವಿಶೇಷ ಅಪಘಾತ ಆಸ್ಪತ್ರೆ(ಟ್ರಾಮಾಕೇರ್ ಸೆಂಟರ್)ಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದಸಿಂಗ್ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನೇದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ಸುವಿಶೇಷ ಅಪಘಾತ ಆಸ್ಪತ್ರೆ(ಟ್ರಾಮಾಕೇರ್ ಸೆಂಟರ್)ಯಲ್ಲಿ ಕೊರೊನಾ ಸೊಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಉದ್ದೇಶಿಸಿದೆ.ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಟ್ರಾಮಾಕೇರ್ ಸೆಂಟರ್ಗೆ ಭೇಟಿ ನೀಡಿ ಪರಿಶೀಲಿಸಿದರು.
ಟ್ರಾಮಾಕೇರ್ ಸೆಂಟರ್ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು,ಇನ್ನೂ ಅಲ್ಪ ಕಾಮಗಾರಿ ಬಾಕಿ ಉಳಿದಿರುವುದನ್ನು ಸಚಿವ ಆನಂದಸಿಂಗ್ ಅವರು ಪರಿಶೀಲಿಸಿ ಕಾಮಗಾರಿ ಹೊಣೆಹೊತ್ತಿರುವ ಏಜೆನ್ಸಿದಾರರಿಗೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
ಸೆಂಟರ್ನ ನಾಲ್ಕು ಮಹಡಿಗಳಲ್ಲಿ ಹಾಕಲಾಗಿರುವ 200 ಬೆಡ್ಗಳನ್ನು(150 ಐಸಿಯು ಬೆಡ್ ಸೇರಿ) ಪರಿಶೀಲಿಸಿದರು. ಶೌಚಾಲಯ ಹಾಗೂ ಇನ್ನೀತರ ವ್ಯವಸ್ಥೆಗಳನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಆನಂದಸಿಂಗ್ ಅವರು ಟ್ರಾಮಾಕೇರ್ ಸೆಂಟರ್ನ ಬಹುತೇಕ ಕಾಮಗಾರಿ ಮುಕ್ತಾಯವಾಗಿದ್ದು, ಇದೇ ಜು.15ಕ್ಕೆ ಇದನ್ನು ಲೋಕಾರ್ಪಣೆ ಮಾಡಬೇಕು ಅಂತ ಅಂದುಕೊಳ್ಳಲಾಗಿತ್ತು.
ಕೊರೊನಾದಿಂದ ಅಲ್ಪ ತಾಂತ್ರಿಕ ಕೆಲಸ ಮಾತ್ರ ಬಾಕಿ ಉಳಿದಿದೆ.ಅದನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಎಕ್ಸಪ್ರೆಸ್ ಫೀಡರ್ ಕೂಡ ಒದಗಿಸಲಾಗಿದೆ. ಈ ತಿಂಗಳ ಅಂತ್ಯಕ್ಕೆ ಉದ್ಘಾಟಿಸಲಾಗುವುದು ಮತ್ತು ಆರಂಭದಲ್ಲಿ ಕೊರೊನಾ ಸೊಂಕಿತರ ಚಿಕಿತ್ಸೆಗೆ ಬಳಸಲಾಗುವುದು. ನಂತರ ಇದನ್ನು ಯಾವ ಉದ್ದೇಶಕ್ಕಾಗಿ ನಿಮರ್ಿಸಲಾಗಿದೆಯೋ ಅದೇ ಉದ್ದೇಶಕ್ಕೆ ಬಳಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ದಮ್ಮೂರು ಶೇಖರ್, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್,ವಿಮ್ಸ್ ನಿದರ್ೇಶಕ ಡಾ.ದೇವಾನಂದ, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಡಿಎಚ್ಒ ಡಾ.ಜನಾರ್ಧನ್ ಮತ್ತಿತರರು ಇದ್ದರು
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 