ಜಿಲಾ ್ಲಕಾನೂನು ಅರಿವು ಕಾರ್ಯಕ್ರಮ
District Legal Awareness Program
ಜಿಲಾ ್ಲಕಾನೂನು ಅರಿವು ಕಾರ್ಯಕ್ರಮ
ಕಾರವಾರ 25: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರವಾರ, ಜಿಲ್ಲಾ ಪೋಲಿಸ್ ಇಲಾಖೆ, ಕಾರವಾರ, ಪ್ರೀಮಿಯರ್ ಸೈನ್ಸ್ ಎಂಡ್ ಕಾಮರ್ಸ್ ಪಿ ಯು ಕಾಲೇಜ್, ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಮಾದಕ ವಸ್ತು ಜಾಗೃತಿ ಮತ್ತು ಮಾದಕವಸ್ತು ಮುಕ್ತ ಭಾರತಕ್ಕಾಗಿ ಸ್ವಾಸ್ಥ್ಯ ಸಂಚರಣೆ ಯೋಜನೆ, 2025 (ಓಂಐಖಂ-ಆಂಘಓ’ ಖಛಿಜಟಜ-2025) ಅಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮವು ಪ್ರೀಮಿಯರ್ ಸೈನ್ಸ್ ಎಂಡ್ ಕಾಮರ್ಸ್ ಪಿ.ಯು. ಕಾಲೇಜ್, ಕಾರವಾರದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮವನ್ನು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ಕವಿತಾ ಶಿವರಾಯ ಉಂಡೋಡಿ ಉದ್ಘಾಟಿಸಿದರು. ಪ್ರೀಮಿಯರ್ ಸೈನ್ಸ್ ಎಂಡ್ ಕಾಮರ್ಸ್ ಪಿ. ಯು. ಕಾಲೇಜ್ ನ ಪ್ರಾಂಶುಪಾಲ ಆರ್. ಗೋವಿಂದಪ್ಪ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಮ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ., ಪೊಲೀಸ್ ಉಪಾಧೀಕ್ಷಕ ಎಸ್.ವಿ.ಗೀರೀಶ್ ಉಪಸ್ಥಿತರಿದ್ದರು. ಶಿರವಾಡದ ಮಾರಿಯಾ ಮಾಗೋ ಫ್ಲೋರಾ ಆಸ್ಪತ್ರೆಯ ವೈದ್ಯೆ ಡಾ. ನಮಿತಾ ವರ್ಗೀಸ್ ಉಪನ್ಯಾಸ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 