ತಪ್ಪದೇ ರೋಟಾ ವೈರಸ್ ಲಸಿಕೆ ಹಾಕಿಸಿ: ಕುಕನೂರ
ಧಾರವಾಡ 29: ಆರು, ಹತ್ತು ಮತ್ತು ಹದಿನಾಲ್ಕು ವಾರದೊಳಗಿನ ಪ್ರತಿ ಮಗುವಿಗೆ ಉಳಿದ ಲಸಿಕೆಗಳ ಜೊತೆಗೆ ತಪ್ಪದೇ ರೋಟಾ ವೈರಸ್ ಲಸಿಕೆಯನ್ನು ಹಾಕಿಸಬೇಕೆಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಗಿರಿಧರ ಕುಕನೂರ ಹೇಳಿದರು.
ಅವರು ಇಂದು ಮಧ್ಯಾಹ್ನ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ರಾಷ್ಟ್ರೀಯ ಲಸಿಕಾ ಕಾರ್ಯಕ್ರಮದಡಿ ಆರಂಭಿಸಿರುವ ರೋಟಾ ವೈರಸ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಕ್ಕಳಿಗೆ ಬರುವ ವಿವಿಧ ರೀತಿಯ ಭೇದಿಗಳಲ್ಲಿ ಶೇ. 40 ರಷ್ಟು ಭೇದಿಗಳು ರೋಟಾ ವೈರಸ್ನಿಂದ ಉಂಟಾಗುತ್ತದೆ. ಆದ್ದರಿಂದ ತಾಯಂದಿರು ಮಗುವಿಗೆ ನಿಯಮಾನುಸಾರ ಹಾಕುವ ವಿವಿಧ ರೀತಿಯ ಲಸಿಕೆಗಳೊಂದಿಗೆ ತಪ್ಪದೇ ರೋಟಾ ವೈರಸ್ ಲಸಿಕೆಯನ್ನು ಮೂರುಸಲ ಹಾಕಿಸಬೇಕು. ಪಾಲಕರು ಅಥವಾ ತಾಯಂದಿರು ತಮ್ಮ ಮಕ್ಕಳನ್ನು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಲಸಿಕೆ ಹಾಕಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಸ್ಪತ್ರೆಯ ಮಕ್ಕಳ ತಜ್ಞ ವೈದ್ಯರಾದ ಡಾ:ಟಿ.ಎ. ಶೇಪೂರ, ಡಾ: ಕೆ.ವಿ. ಅಚ್ಯುತ್, ಡಾ: ಎಸ್.ಟಿ. ಸ್ವಾಮಿ, ಡಾ:ಸಿ.ಬಿ. ನಾಡಗೌಡ ಸೇರಿದಂತೆ ವಿವಿಧ ಶಿಶುವೈದ್ಯರು, ಸ್ನಾತಕೋತ್ತರ ವೈದ್ಯ ವಿದ್ಯಾಥರ್ಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 