ಧೋನಿ ಮೇಲೆ ನಿವೃತ್ತಿ ಒತ್ತಡ ಹೇರ ಬೇಡಿ: ನಾಸೀರ್ ಹುಸೇನ್
ನವದೆಹಲಿ, ಏ.11, ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರಲ್ಲಿ ಇನ್ನಷ್ಟು ಕ್ರಿಕೆಟ್ ಬಾಕಿ ಇದ್ದು, ಅವರ ಇಂಗ್ಲೆಂಡ್ ತಂಡದ ಮಾಜಿ ಆಟಗಾರ ನಾಸೀರ್ ಹುಸೇನ್ ಅಭಿಪ್ರಾಯ ಪಟ್ಟಿದ್ದಾರೆ. “ಧೋನಿ ಅವರು ಒಂದೊಮ್ಮೆ ನಿವೃತ್ತಿ ಘೋಷಿಸಿದರೆ, ಅವರನ್ನು ಮತ್ತೆ ವಾಪಸ್ ಕರೆಸಿಕೊಳ್ಳಲಾಗೊಲ್ಲ. ಧೋನಿ ಅವರಂತಹ ಸ್ಟಾರ್ ಆಟಗಾರರು ದಶಕದಲ್ಲಿ ಒಬ್ಬರು ಹುಟ್ಟುವುದು. ಅವರ ಮೇಲೆ ನಿವೃತ್ತಿಯ ಒತ್ತಡವನ್ನು ಹೇರ ಬೇಡಿ. ಧೋನಿ ಅವರಿಗೆ ಮಾತ್ರ ತಮ್ಮ ಮಾನಸಿಕ ಸ್ಥಿತಿಗಳ ಬಗ್ಗೆ ಗೊತ್ತಿರುತ್ತೆ. ಸುಮ್ಮನೆ ಬೇರೆಯವರು ಮಾತನಾಡುವುದು ಸರಿಯಿಲ್ಲ” ಎಂದು ನಾಸೀರ್ ಹುಸೇನ್ ತಿಳಿಸಿದ್ದಾರೆ. “ಧೋನಿ ಅವರಲ್ಲಿ ಇನ್ನು ದೇಶಕ್ಕಾಗಿ ಆಡುವ ಸಾಮರ್ಥ್ಯವಿದೆ. ನನ್ನ ನಂಬಿಕೆ ಪ್ರಕಾರ ಧೋನಿ ಇನ್ನೂ ಸಹ ಟೀಮ್ ಇಂಡಿಯಾದ ಜಯದಲ್ಲಿ ಮಿಂಚಬಹುದು. ಧೋನಿ ಒಂದೆರೆಡು ಬಾರಿ ಮಾತ್ರ ಚೇಸ್ ಮಾಡುವಾಗ ಎಡವಿದ್ದಾರೆ” ಎಂದು ಹೇಳಿದ್ದಾರೆ. ಸ್ಟಾರ್ ಆಟಗಾರ ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾವನ್ನು ಮುನ್ನಡೆಸಿ ಮಿಂಚಿದ್ದಾರೆ. ಅಲ್ಲದೆ 2007ರಲ್ಲಿ ಟಿ-20 ವಿಶ್ವಕಪ್ ಹಾಗೂ 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದ ತಂಡದ ನಾಯಕರಾಗಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 