ಭೂಗತ ಡಾನ್ ಮುತ್ತಪ್ಪ ರೈ ನಿಧನ
ಬೆಂಗಳೂರು, ಮೇ 15, ಭೂಗತ ಡಾನ್, ಹಾಗೂ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. ಕೆಲವು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.ಹಲವು ವರ್ಷಗಳ ಕಾಲ ಭೂಗತ ಜಗತ್ತಿನಲ್ಲಿ ಕಾಣಿಸಿಕೊಂಡಿದ್ದ ಮುತ್ತಪ್ಪ ರೈ, ಬಳಿಕ ಜಯಕರ್ನಾಟಕ ಸಂಘಟನೆ ಸ್ಥಾಪಿಸಿದ್ದರು. ಬೆಂಗಳೂರಿನ ಬಿಡದಿ ಬಳಿ ವಾಸವಾಗಿದ್ದರು. ಇಂದು ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದ್ದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಮಾತ್ರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 