ಡಬಲ್ ಮರ್ಡರ್ ಕೇಸ್ ರಾಂಪಾಲ್ ಅಪರಾಧಿ
ಹಿಸಾರ್(ಹರ್ಯಾಣ) 11: ಡಬಲ್ ಮರ್ಡರ್ ಕೇಸ್
ನಲ್ಲಿ ಸ್ವಯಂ ಘೋಷಿತ ದೇವಮಾನವ ರಾಂಪಾಲ್ ಅಪರಾಧಿ ಎಂದು ಹಯರ್ಾಣದ ಹಿಸಾರ್
ನ್ಯಾಯಾಲಯ ಘೋಷಿಸಿದೆ. ಶಿಕ್ಷೆಯ ಪ್ರಮಾಣ ಅ.16 ಅಥವಾ 17ರಂದು
ಪ್ರಕಟವಾಗಲಿದೆ.
ಬಾರ್ವಾಲದಲ್ಲಿರುವ ರಾಂಪಾಲ್ ನ ಸತ್ಲೋಕ್ ಆಶ್ರಮದ
ಹೊರಗೆ ನಾಲ್ವರು ಮಹಿಳೆಯರು ಮತ್ತು ಇಬ್ಬರು ಮಕ್ಕಳ ಶವ ಪತ್ತೆಯಾದ ಹಿನ್ನಲೆಯಲ್ಲಿ
ರಾಂಪಾಲ್ ನನ್ನು ಬಂಧಿಸಲಾಗಿತ್ತು. ಮತ್ತೊಂದು ಬಾರಿ ಆಶ್ರಮದಲ್ಲಿ
ಮತ್ತೊಬ್ಬ ಮಹಿಳೆಯ ಶವ ಸಿಕ್ಕಿದ ಹಿನ್ನಲೆಯಲ್ಲಿ
ರಾಂಪಾಲ್ ವಿರುದ್ಧ ಮತ್ತೊಂದು ಕೇಸು ದಾಖಲಾಗಿತ್ತು.
2015ರಲ್ಲಿ ಪೊಲೀಸರು ಮತ್ತು ರಾಂಪಾಲ್ ನ ಭಕ್ತರ ನಡುವೆ ತೀವ್ರ ವಾದ-ವಿವಾದಗಳು ನಡೆದ ನಂತರ ಕೊನೆಗೂ ರಾಂಪಾಲ್ ನನ್ನು ಬಂಧಿಸಲಾಗಿತ್ತು. ಅಪಾರ ಅನುಯಾಯಿಗಳನ್ನು ಹೊಂದಿರುವ ರಾಂಪಾಲ್ ನನ್ನು ಹಿಸಾರ್ ನ ಕೇಂದ್ರ ಕಾರಾಗೃಹ-2ರಲ್ಲಿರಿಸಲಾಗಿದೆ.
ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆ ವೇಳೆ ಸುಮಾರು 80 ಸಾಕ್ಷಿಗಳ ಹೇಳಿಕೆಯನ್ನು ಪಡೆಯಲಾಗಿದೆ ಎಂದು ಹೇಳಲಾಗಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 