ವರದಕ್ಷಿಣೆ ಕಿರುಕುಳ: ಬಸ್ ಕಂಡಕ್ಟರ್ಗೆ ಆರು ತಿಂಗಳು ಜೈಲು ಶಿಕ್ಷೆ
Dowry harassment: Bus conductor sentenced to six months in jail
ಹೂವಿನಹಡಗಲಿ 28: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಸಾಬೀತಾಗಿದ್ದರಿಂದ ಇಲ್ಲಿನ ಜೆಎಂಎಫ್ ಸಿ ನ್ಯಾಯಾಲಯ ಬಸ್ ಕಂಡಕ್ಟರ್ ಗೆ ಆರು ತಿಂಗಳು ಜೈಲು, ರೂ. 50 ಸಾವಿರ ದಂಡ ವಿಧಿಸಿ ಆದೇಶಿಸಿದೆ.
ಮೊದಲ ಪತ್ನಿಯನ್ನು ದೂರವಾಗಿಸಿ, ಎರಡನೇ ಮದುವೆಯಾದ ಕೊಮಾರನಹಳ್ಳಿ ತಾಂಡಾದ ಆರೋಪಿ, ರಾಣೆಬೆನ್ನೂರು ಸಾರಿಗೆ ಘಟಕದಲ್ಲಿ ಆರೋಪಿ ರವಿ ನಾಯ್ಕ ಕಂಡಕ್ಟರ್ ಕೆಲಸ ಮಾಡುತ್ತಿದ್ದಾನೆ. ದಾಸರಹಳ್ಳಿ ತಾಂಡಾದ ಆಶಾಬಾಯಿಯನ್ನು 2010ರಲ್ಲಿ ಮದುವೆಯಾಗಿದ್ದ. ವರದಕ್ಷಿಣೆ ಕಿರುಕುಳ ನೀಡಿ ಆಕೆಯಿಂದ ದೂರವಾಗಿ ಸ್ವಗ್ರಾಮದಲ್ಲಿ ಎರಡನೇ ಮದುವೆಯಾಗಿದ್ದ. ಈ ಕುರಿತು ಮೊದಲ ಪತ್ನಿ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.ನ್ಯಾಯಾಲಯದ ವಿಚಾರಣೆಯಲ್ಲಿ ಆರೋಪ ಸಾಬೀತಾಗಿದ್ದರಿಂದ ನ್ಯಾಯಾಧೀಶರಾದ ಟಿ.ಅಕ್ಷತಾ ಅವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ್ದಾರೆ. ಆರೋಪಿ ರವಿ ನಾಯ್ಕನಿಗೆ 6 ತಿಂಗಳು ಸಾದಾ ಜೈಲು ಶಿಕ್ಷೆ, ರೂ. 10 ಸಾವಿರ ದಂಡ, ದಂಡ ಪಾವತಿಸದಿದ್ದಲ್ಲಿ 3 ತಿಂಗಳು ಸಾದಾ ಜೈಲು, ವರದಕ್ಷಿಣೆ ನಿಷೇಧ ಕಾಯ್ದೆಯ ವಿವಿಧ ಕಲಂಗಳಡಿ ಒಟ್ಟು ರೂ. 30 ಸಾವಿರ ದಂಡ ವಿಧಿಸಲಾಗಿದೆ.
ಆರೋಪಿಯ ತಾಯಿ ಲಕ್ಷ್ಮಿಬಾಯಿಗೆ ರೂ. 20 ಸಾವಿರ ದಂಡ ತಪ್ಪಿದಲ್ಲಿ 3 ತಿಂಗಳು, ಜೈಲು, ಆರೋಪಿಯ ಸಹೋದರ ಲಾವಾನಾಯ್ಕ, 2ನೇ ಪತ್ನಿಯ ತಂದೆತಾಯಿಯಾದ ಮಂಗ್ಲನಾಯ್ಕ, ರೇವಣಿಬಾಯಿ ಅವರಿಗೆ ತಲಾ ರೂ. 500 ದಂಡ, ತಪ್ಪಿದಲ್ಲಿ 20 ದಿನ ಜೈಲು ಶಿಕ್ಷೆ ವಿಧಿಸಿದೆ. ದಂಡದ ಮೊತ್ತ ರೂ. 50 ಸಾವಿರ ಮೊದಲ ಪತ್ನಿ ಆಶಾಬಾಯಿಗೆ ಪರಿಹಾರ ನೀಡಲು ನ್ಯಾಯಾಲಯ ಸೂಚಿಸಿದೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಕೆ.ಅಜ್ಜಯ್ಯ ವಾದ ಮಂಡಿಸಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 