ಪುಸ್ತಕ, ವಾಣಿಜ್ಯ ಮಳಿಗೆಗೆ ಡಾ.ಅಜಯ ಸಿಂಗ್ ಭೇಟಿ
ಕಲಬುರಗಿ, ಫೆ 7, ಬಿಸಿಲನಾಡು ಕಲಬುರಗಿಯಲ್ಲಿ ನಡೆಯುತ್ತಿರುವ 85ನೇ ಅಖಿಲ ಕನ್ನಡ ಸಾಹಿತ್ಯ ಸಮ್ನೇಳನದ ಮುಖ್ಯ ವೇದಿಕೆ ಹತ್ತಿರ ಸ್ಥಾಪಿಸಲಾಗಿರುವ ಪುಸ್ತಕ ಮತ್ತು ವಾಣಿಜ್ಯ ಮಳಿಗೆಗೆ ಶುಕ್ರವಾರ ಪುಸ್ತಕ ಪ್ರದರ್ಶನ ಮತ್ತು ವಾಣಿಜ್ಯ ಮಳಿಗೆ ಸಮಿತಿಯ ಅಧ್ಯಕ್ಷ, ಶಾಸಕ ಡಾ.ಅಜಯ ಸಿಂಗ್ ಭೇಟಿ ನೀಡಿದರು.ಇದೇ ಸಂದರ್ಭದಲ್ಲಿ ಶಾಸಕರು ಪುಸ್ತಕ ವ್ಯಾಪಾರಿಗಳ ಜತೆ ಸಮಾಲೋಚನೆ ನಡೆಸಿದರು. ಪುಸ್ತಕ ಮಾರಾಟದ ಬಗ್ಗೆ ಹಾಗೂ ಓದುಗರ ಪ್ರತಿಕ್ರಿಯೆ ಬಗ್ಗೆ ಮಾಹಿತಿ ಪಡೆದರು. ತುಂಬಾ ಅಚ್ಚುಕಟ್ಟಾಗಿ ಪುಸ್ತಕ ಮಳಿಗೆ ಮತ್ತು ಲೇಖಕರ ಕಟ್ಟೆ ನಿರ್ಮಿಸಿದ ಸಮಿತಿಯ ಶ್ರಮವನ್ನು ಶ್ಲಾಘಿಸಿದರು.ಇದೇ ಸಂದರ್ಭದ ಸಮಿತಿಯ ಕಾರ್ಯಾಧ್ಯಕ್ಷ ಶರಣಪ್ಪ ಬಿ. ಮಾತನಾಡಿ, ಸಾಹಿತ್ಯ ಸಮ್ಮೇಳನದ ಮೊದಲನೇ ದಿನ 413 ಪುಸ್ತಕ ಮಳಿಗೆಯಿಂದ 60 ಲಕ್ಷ ಮತ್ತು 210 ವಾಣಿಜ್ಯ ಮಳಿಗೆಯಿಂದ 20 ಲಕ್ಷ ರೂ. ವ್ಯಾಪಾರವಾಗಿದೆ ಎಂದರು. ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಸತೀಷಕುಮಾರ, ಮಂಜುನಾಥ್ ಅಜಯಕುಮಾರ, ಪರಶುರಾಮ ಕಟ್ಟಿಮನಿ, ಪಾರ್ವತಿ ರೆಡ್ಡಿ ಮತ್ತಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 