ಪತ್ರಕರ್ತ ಹನುಮಂತು ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ಚೆಕ್ ವಿತರಿಸಿದ ಡಾ.ಅಶ್ವತ್ಥನಾರಾಯಣ
ಬೆಂಗಳೂರು, ಮೇ 11, ಅಕಾಲಿಕ ನಿಧನ ಹೊಂದಿದ್ದ ರಾಮನಗರದ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಮನೆಗೆ ತೆರಳಿ ಅವರ ಧರ್ಮಪತ್ನಿ ಶಶಿಕಲಾ ಅವರಿಗೆ ಡಾ.ಅಶ್ವಥ್ ನಾರಾಯಣ್ ಫೌಂಡೇಶನ್ ವತಿಯಿಂದ 5 ಲಕ್ಷ ರೂ. ಗಳನ್ನು ನೀಡಿದೆ. ಇವರಿಗೆ ಕೆಎಂಎಫ್ ನಲ್ಲಿ ಉದ್ಯೋಗ ಕೊಡಿಸಲಾಗುವುದು. ಕುಟುಂಬದ ಈ ಸಂಕಷ್ಟದ ದಿನಗಳಲ್ಲಿ ನಮ್ಮ ಪ್ರಾರ್ಥನೆ ನಿಮ್ಮೊಂದಿಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.ಇಂದು ಬೆಳಗ್ಗೆ ಅಶ್ವತ್ಥನಾರಾಯಣ ಅವರ ಮನೆಗೆ ತೆರಳಿ ಚೆಕ್ ಹಸ್ತಾಂತರಿಸಿದರು. ಕರ್ತವ್ಯದಲ್ಲಿದ್ದಾಗ ಹನುಮಂತು ಅಪಘಾತಕ್ಕೀಡಾಗಿ ನಿಧನರಾಗಿದ್ದರು. ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಹಲವು ಗಣ್ಯರು ಹನುಮಂತು ಕುಟುಂಬಕ್ಕೆ ಸಹಾಯಹಸ್ತ ಚಾಚಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 