ಡಾ. ಬಿ ಆರ್ ಅಂಬೇಡ್ಕರ್ ಅವರ ತತ್ವಾದರ್ಶ ನಮಗೆ ಸ್ಫೂರ್ತಿ: ಬಂಡೆ
Dr. BR Ambedkar's philosophy inspires us: Bande
ತಾಂಬಾ 06: ಸಮಾನತೆ ಮತ್ತು ಮಾನವೀಯ ಮೌಲ್ಯಗಳಿಗಾಗಿ ಜೀವನಪಯಂರ್ತ ಹೋರಾಟ ನಡೆಸಿ ನೂತನ ದಿಕ್ಕೊಂದನ್ನು ಸೂಚಿಸಿದ ಭಾರತದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ತತ್ವಾದರ್ಶ ನಮಗೆ ಸ್ಫೂರ್ತಿಯಾಗಿವೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಶುಕ್ರವಾರದಂದು ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಡಾ.ಬಿ ಆರ್ ಅಂಬೇಡ್ಕರ್ ಅವರ 68 ನೇ ಮಹಾಪರಿನಿರ್ವಾಣ ದಿನವನ್ನು ಉದ್ಧೇಶಿಸಿ ಮಾತನಾಡಿದ ಅವರು ಡಾ. ಬಿ ಆರ್ ಅಂಬೇಡ್ಕರ್ ಅವರು ಅಪಾರವಾದ ಅಧ್ಯಯನ, ಚಿಂತನೆಗಳು, ತಮ್ಮ ಸಂಶೋಧನೆ ಮತ್ತು ಪಾಂಡಿತ್ಯಗಳಿಂದ ಬೌದ್ಧಿಕ ಪ್ರಖರತೆಯನ್ನು ಹೊಂದಿದ್ದರು. ಛಲ, ಶ್ರದ್ಧೆ ಮತ್ತು ಪರಿಶ್ರಮದಿಂದ ಪ್ರತಿಕೂಲ ಸನ್ನಿವೇಶದಲ್ಲೂ ಒಬ್ಬ ಸಾಮಾನ್ಯ ಮನುಷ್ಯ ಏನೆಲ್ಲವನ್ನು ಸಾಧಿಸಬಲ್ಲ ಎನ್ನುವುದಕ್ಕೆ ಅವರ ಜೀವನವೇ ಸಾಕ್ಷಿ. ಅವರ ಚಿಂತನೆಗಳು ಇಂದಿನ ಪೀಳಿಗೆಗೆ ದಾರೀದೀಪ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, 'ಸಮಾಜದ ಎಲ್ಲ ವರ್ಗಗಳ ಜನರೂ ಸಮಾನ ಹಕ್ಕು- ಅವಕಾಶಗಳನ್ನು ಹೊಂದಬೇಕು ಮತ್ತು ಅನುಭವಿಸಬೇಕು ಎಂಬ ವಿಚಾರಧಾರೆಯನ್ನು ಸಂವಿಧಾನದಲ್ಲಿ ಅಳವಡಿಸಿದ ಅಂಬೇಡ್ಕರ್ ಅವರು ಸಮಾಜದ ಏಳಿಗೆ ಹಾಗೂ ರಾಷ್ಟ್ರದ ಪ್ರಗತಿಯ ಹಾದಿ ಬಗ್ಗೆ ಅತ್ಯುತ್ತಮ ದೂರದೃಷ್ಟಿ ಹೊಂದಿದ್ದರು ಎಂದು ಹೇಳಿದರು.
ಶಿಕ್ಷಕರಾದ ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಸೇರಿದಂತೆ ಶಾಲಾ ಮಕ್ಕಳು ಭಾಗವಹಿಸಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 