ಡಾ. ಪರಮೇಶ್ವರ್ ನಿವಾಸದಲ್ಲಿ ಐಟಿ ಅಧಿಕಾರಿಗಳಿಂದ ಮುಂದುವರೆದ ಪರಿಶೀಲನೆ
ಬೆಂಗಳೂರು, ಅ 11: ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಒಡೆತನದ ತುಮಕೂರಿನಲ್ಲಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳಿಂದ ಶುಕ್ರವಾರ ಕೂಡ ದಾಖಲೆಗಳ ಶೋಧ ಕಾರ್ಯ ಮುಂದುವರೆದಿದೆ. ಈಗಾಗಲೇ 7 ಮಂದಿ ಐಟಿ ಅಧಿಕಾರಿಗಳ ತಂಡ ಸ್ಥಳಕ್ಕಾಗಮಿಸಿದ್ದು, ಪ್ರಾಂಶುಪಾಲ ಡಾ.ರವಿ ಪ್ರಕಾಶ್ ಅವರನ್ನು ಕೂರಿಸಿಕೊಂಡು ಖಾಸಗಿ ಕೋಣೆಯಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ನಿನ್ನೆ ವಶಪಡಿಸಿಕೊಂಡಿದ್ದ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಸೀಟ್ ಕಡತಗಳ ದಾಖಲೆಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ. ಕೋಲಾರದಲ್ಲಿರುವ ಕೇಂದ್ರ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಒಡೆತನದ ದೇವರಾಜು ಅರಸು ವೈದ್ಯಕೀಯ ಕಾಲೇಜಿನಲ್ಲಿ ಅಧಿಕಾರಿಗಳಿಂದ ಇಂದು ಕೂಡ ದಾಖಲೆಗಳ ಪರಿಶೀಲನೆ ಮುಂದುವರೆದಿದೆ. ಐಟಿ ಅಧಿಕಾರಿಗಳ ಮನವಿ ಮೇರೆಗೆ ಕಾಲೇಜು ಆವರಣದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಕಾಲೇಜಿನ ತಾಂತ್ರಿಕ ವಿಭಾಗದಲ್ಲಿ ಅಧಿಕಾರಿಗಳಿಂದ ಶೋಧ ಕಾರ್ಯ ಮುಂದುವರೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯಲ್ಲಿರುವ ಆರ್. ಜಾಲಪ್ಪ ಅವರ ಮಗ ರಾಜೇಂದ್ರ ನಿವಾಸದಲ್ಲಿಯೂ ಐಟಿ ಅಧಿಕಾರಿಗಳು, ಬೆಳಗ್ಗೆಯಿಂದ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ರಾತ್ರಿ ಐಟಿ ಇಲಾಖೆಯ ಅಧಿಕಾರಿಗಳು ಅಲ್ಲಿಯೇ ಮಲಗಿದ್ದು, ಇಂದು ಬೆಳಗ್ಗೆ ಎದ್ದು, ದೊಡ್ಡಬಳ್ಳಾಪುರದ ಇಂಜಿನಿಯರಿಂಗ್ ಕಾಲೇಜು, ಕೋಲಾರದ ಮೆಡಿಕಲ್ ಕಾಲೇಜಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ರಾಜೇಂದ್ರ, ಪತ್ನಿ ಸುಜಾತಾ, ರಾಕೇಶ್ ಮನೆಯಲ್ಲೇ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 