ಮೃತ ಯೋಧನ ಕುಟುಂಬಕ್ಕೆ ಡಾ. ಪ್ರಭುಗೌಡ ಲಿಂಗದಳ್ಳಿ ಸಾಂತ್ವನ
Dr. Prabhugowda Lingadalli condoles with the family of the deceased soldier
ಮೃತ ಯೋಧನ ಕುಟುಂಬಕ್ಕೆ ಡಾ. ಪ್ರಭುಗೌಡ ಲಿಂಗದಳ್ಳಿ ಸಾಂತ್ವನ
ತಾಳಿಕೋಟಿ 04: ತಾಲೂಕಿನ ಬಳಗಾನೂರ ಗ್ರಾಮದ ನಿವಾಸಿಯಾದ ಬಿಎಸ್ಎಫ್ ಯೋಧ ಸಿದ್ದಣ್ಣ ಮಾದರ ಅರಳಿಕಟ್ಟಿ ಇವರು ಹರಿಯಾಣ ರಾಜ್ಯದ ಅಗರ್ತಲಾದಲ್ಲಿ ಸೇವಾ ನಿರತರಾದ ಸಮಯದಲ್ಲಿಯೇ ಗುರುವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಈ ಹಿನ್ನಲೆಯಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಖ್ಯಾತ ನೇತ್ರ ತಜ್ಞ ಡಾ.ಪ್ರಭುಗೌಡ ಲಿಂಗದಳ್ಳಿ ಇವರು ರವಿವಾರ ಮೃತ ಯೋಧನ ಮನೆಗೆ ಭೇಟಿ ನೀಡಿ ಅವರ ಕುಟುಂಬಕ್ಕೆ ಧೈರ್ಯ ತುಂಬಿ ಸಾಂತ್ವನ ತಿಳಿಸಿದರು.
ಡಾ.ಪ್ರಭುಗೌಡರು ಮಾತನಾಡಿ ಗಡಿ ರಕ್ಷಣೆಗೆ ನಿಂತ ಮೃತ ಯೋಧ ಸಿದ್ದಣ್ಣ ಅರಳಿಕಟ್ಟಿ ಅವರ ಅಕಾಲಿಕ ನಿಧನವು ತುಂಬಲಾರದ ನಷ್ಟವಾಗಿದ್ದು ಇದನ್ನು ಸಹಿಸುವ ಶಕ್ತಿ ಅವರ ಪತ್ನಿ ಹಾಗೂ ಕುಟುಂಬದ ಸದಸ್ಯರಿಗೆ ಭಗವಂತ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದರು. ಮೃತ ಯೋಧನ ಧರ್ಮಪತ್ನಿ ಕವಿತಾ ಮಾದರ, ಪುತ್ರ ರವಿಕಾಂತ ಮಾದರ, ಪುತ್ರಿ ಡಾ.ಸುಮಿತಾ, ಕುಟುಂಬದ ಸದಸ್ಯರು ಗ್ರಾಮದ ಗಣ್ಯರು ಹಿರಿಯರು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 