ಡಾ. ಅಂಬೇಡ್ಕರ್ ಸೋಲಿಸಿದ್ದ ಕಾಂಗ್ರೆಸ್
ಲೋಕದರ್ಶನ ವರದಿ
ಅಥಣಿ 26: ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಇವರನ್ನು ಕಾಂಗ್ರೆಸ್ ಪಕ್ಷ ಎರಡು ಬಾರಿ ಚುನಾವಣೆಯಲ್ಲಿ ಸೋಲಿಸಿತು. ದೇಹಲಿಯಲ್ಲಿ ಅವರ ಅಂತಿಮ ಸಂಸ್ಕಾರಕ್ಕೂ ಸ್ಥಳಾವಕಾಶ ನೀಡಲಿಲ್ಲ. ಆದರೂ ಕಾಂಗ್ರೆಸ್ನವರು ಮಾತ್ರ ಮತಬ್ಯಾಂಕ್ಗಾಗಿ ಬಾಬಾಸಾಹೇಬ ಅಂಬೇಡ್ಕರ ಅನುಯಾಯಿ ಎಂದು ಹೇಳಿಕೊಳ್ಳುತ್ತಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ ಕಟೀಲ್ ಹೇಳಿದರು.
ಸಂವಿಧಾನ ದಿನದ ಅಂಗವಾಗಿ ಅಂಬೇಡ್ಕರ ಭಾವ ಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿ ಮಾತನಾಡಿ, ಡಾ.ಅಂಬೇಡ್ಕರ ರಚಿಸಿದ ಸಂವಿಧಾನ ಎಲ್ಲರಿಗೂ ಸಮಾಮವಾದ ಅಧಿಕಾರ ನೀಡಿದೆ ಅಲ್ಲದೆ ಮೇಲು, ಕೀಳು ಯಾರಲ್ಲಿಯೂ ಎಲ್ಲರೂ ಸಮಾನರು ಎನ್ನುವ ಭಾವ ಮೂಡಿ ಚಹಾ ಮಾರುವ ವ್ಯಕ್ತಿ ದೇಶದ ಪ್ರಧಾನಿಯಾಗಿದ್ದಾರೆ ಎಂದು ಹೇಳಿದರು. ನವೆಂಬರ 26ರ ದಿನವನ್ನು ಪ್ರಧಾನಿ ನರೇಂದ್ರ ಮೋದಿಯವರೇ ಇಂದಿನ ದಿನವನ್ನು ಸಂವಿಧಾನದ ದಿನ ಎಂದು ಘೋಶಿಸಿದ್ದಾರೆ ಎಂದ ಅವರು ಜನೇವರಿ 26 ರಂದು ಸಂವಿಧಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು ಎಂದು ಹೇಳಿದರು.
ಡಿಸಿಎಮ್ ಗೋವಿಂದ ಕಾರಜೋಳ ಮಾತನಾಡಿ, ಶೋಷಿತರಿಗೆ ಬದಕುವ ಅಧಿಕಾರವನ್ನು ಸಂವಿಧಾನದ ಮೂಲಕ ಡಾ.ಅಂಬೇಡ್ಕರ ನೀಡಿದರು. ಸಮಾನತೆಯ ತತ್ವವನ್ನು ಸಂವಿಧಾನದಲ್ಲಿ ಅಳವಿಡಿಸುವ ಮೂಲಕ ವಿಶ್ವದ ಅನೇಕ ರಾಷ್ಟ್ರಗಳಿಗೆ ನಮ್ಮ ಸಂವಿಧಾನ ಮಾದರಿಯಾಗುವಂತೆ ಮಾಡಿದರು ಎಂದ ಅವರು ಇಂತಹ ಅಮೂಲ್ಯ ಸಂವಿಧಾನ ನೀಡಿದ ಡಾ.ಅಂಬೇಡ್ಕರರ ಸ್ಮರಣೆ ಇಂದು ನಡೆಯಲಿ ಎಂದರು.
ಡಿಸಿಎಮ್ ಲಕ್ಷ್ಮಣ ಸವದಿ, ಬಿಜೆಪಿ ಅಭ್ಯಥರ್ಿ ಮಹೇಶ ಕುಮಠಳ್ಳಿ, ಬಿಜೆಪಿ ಮುಖಂಡರಾದ ಶ್ರೀಕಾಂತ ಕುಲಕಣರ್ಿ, ಉಮೇಶ ಬಂಟೋಡ್ಕರ, ಆನಂದ ದೇಶಪಾಂಡೆ, ಮಲ್ಲು ಹುದ್ದಾರ, ಪ್ರಭಾಕರ ಚವ್ಹಾಣ, ಸುಶೀಲ ಪತ್ತಾರ ಸೇರಿದಂತೆ ನೂರಾರು ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ತೆರೆದ ವಾಹನದಲ್ಲಿ ರಾಜ್ಯ ಅಧ್ಯಕ್ಷರು, ಡಿಸಿಎಮ್ ಸವದಿ, ಕಾರಜೋಳ ಮೆರವಣಿಗೆಯಲ್ಲಿ ತೆರಳಿ ಲಿಡಕರ್ ಕಾಲನಿಯಲ್ಲಿರುವ ಜಗಜೀವನರಾಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 