ಅರಮನೆ ಮೈದಾನದ ಬಳಿ ಈಶಾನ್ಯ ರಾಜ್ಯಗಳ ಜನರ ಜಮಾವಣೆ: ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ ಡಾ.ಕೆ.ಸುಧಾಕರ್
ಬೆಂಗಳೂರು, ಮೇ 23,ಈಶಾನ್ಯ ರಾಜ್ಯದ ನೂರಾರು ಕಾರ್ಮಿಕರು ಭಾರಿ ಸಂಖ್ಯೆಯಲ್ಲಿ ಅರಮನೆ ಮೈದಾನದ ಬಳಿ ಜಮಾಯಿಸಿ ಗೊಂದಲ ಉಂಟಾಗಿದ್ದನ್ನು ಗಮನಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಖುದ್ದು ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದರು.ತಪ್ಪು ಮಾಹಿತಿಯಿಂದಾಗಿ ಮಣಿಪುರ, ಒಡಿಶಾ ರಾಜ್ಯಗಳ ಸಾವಿರಾರು ಮಂದಿ ಜಮಾಯಿಸಿದ್ದರಿಂದ ಈ ಗೊಂದಲ ಉಂಟಾಗಿತ್ತು. ಒಂದೂವರೆ ಸಾವಿರ ಮಂದಿಗೆ ಆಯಾ ರಾಜ್ಯಗಳಿಗೆ ಕಳುಹಿಸಲು ವ್ಯವಸ್ಥೆ ಮಾಡಿಕೊಂಡು ಸೇವಾಸಿಂಧು ಆ್ಯಪ್ ಮೂಲಕ ಮೊಬೈಲ್ ಗಳಿಗೆ ಸಂದೇಶ ರವಾನಿಸಲಾಗಿತ್ತು. ಆ ಸಂದೇಶ ಅವರ ಮಧ್ಯೆಯೇ ಫಾರ್ವರ್ಡ್ ಆಗಿ ಇಂದು ಪ್ರಯಾಣಕ್ಕೆ ಆಯ್ಕೆ ಆಗದಿದ್ದವರೂ ನೂರಾರು ಸಂಖ್ಯೆಯಲ್ಲಿ ಆಗಮಿಸಿ ಭಾರಿ ದಟ್ಟಣೆ ಉಂಟಾಗಿತ್ತು.
ಚಿಕ್ಕಬಳ್ಳಾಪುರ ಪ್ರವಾಸಕ್ಕೆ ಹೊರಟ್ಟಿದ್ದ ಸಚಿವರು ಭಾರಿ ದಟ್ಟಣೆ ಗಮನಿಸಿ ಸ್ಥಳಕ್ಕೆ ಧಾವಿಸಿ ಗೊಂದಲಕ್ಕೆ ಕಾರಣಗಳನ್ನು ಅಧಿಕಾರಿಗಳಿಂದ ಪಡೆದರು.ತಕ್ಷಣವೇ ಮೊಬೈಲ್ ಮೂಲಕ ಮುಖ್ಯ ಕಾರ್ಯದರ್ಶಿ ಸಹಿತ ಹಿರಿಯ ಅಧಿಕಾರಿಗಳ ಜತೆ ಮಾತನಾಡಿ ಗೊಂದಲ ಬಗೆಹರಿಸಲು ಕ್ರಮಕೈಗೊಳ್ಳುವಂತೆ ಆದೇಶ ನೀಡಿದರು.ಈ ಸಂದರ್ಭದಲ್ಲಿ ಮೂರ್ಛೆ ರೋಗದಿಂದ ಬಳಲುತ್ತಿದ್ದ ಇರ್ಷಾದ್ ಎಂಬಾತ ಕುಸಿದು ಬಿದ್ದಾಗ ಆತನ ಬಳಿ ಧಾವಿಸಿದ, ಸ್ವತಃ ವೈದ್ಯರೂ ಆಗಿರುವ ಸಚಿವ ಸಧಾಕರ್ ಅವರು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟರು.ನಂತರ ಈಶಾನ್ಯ ರಾಜ್ಯಗಳ ಜನರುದ್ದೇಶಿಸಿ ಮಾತನಾಡಿ, ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರಿಗೂ ಸರ್ಕಾರದ ವೆಚ್ಚದಲ್ಲಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗುವುದು. ಮುಖ್ಯಮಂತ್ರಿ ಅವರು ಅದಕ್ಕೆ ಬೇಕಾದ ಎಲ್ಲಾ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ನೀವು ನಿಮ್ಮ ಊರಿಗೆ ಹೋಗಲು ಹೆಚ್ಚುವರಿ ಬೋಗಿಗಳನ್ನು ಒದಗಿಸಲು ರೈಲ್ವೆ ಸಚಿವರಿಗೂ ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 