ಕೃಷಿ ವಿವಿ ನೇಮಕಾತಿಗೆ ಏಕರೂಪ ನಿಯಮ ರಚನೆಯ ಕರಡು ಅಂತಿಮ: ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟನೆ
ಬೆಂಗಳೂರು, ಮಾ .19 ರಾಜ್ಯದಲ್ಲಿರುವ ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಬೋಧಕ, ಬೋಧಕೇತರ, ಹಣಕಾಸಿನ ಸೌಕರ್ಯ ಮತ್ತು ಸೇವಾ ನಿಯಮಕ್ಕೆ ಏಕರೂಪ ಕಾಯಿದೆ ನಿಯಮಕ್ಕೆ ಸಂಬಂಧಿಸಿದ ಏಕರೂಪ ಪರಿನಿಯಮ ರಚನೆಯ ಕುರಿತು ಈಗಾಗಲೇ ಹಲವು ಸುತ್ತಿನ ಸಭೆಗಳನ್ನು ನಡೆಸಿ ಕರಡನ್ನು ಅಂತಿಮಗೊಳಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.ವಿಧಾನ ಪರಿಷತ್ತಿನಲ್ಲಿ ಎಂ.ಸಿ.ವೇಣುಗೋಪಾಲ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳ ವ್ಯವಸ್ಥಾಪನಾ ಮಂಡಳಿಗಳ ಅನುಮೋದನೆ ಪಡೆಯಲಾಗಿದೆ. ಕರಡು ಏಕರೂಪ ಪರಿನಿಯಮಕ್ಕೆ ಆರ್ಥಿಕ ಇಲಾಖೆ, ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆ(ಸೇವಾ ನಿಯಮಗಳು) ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆಗಳ ಅಭಿಪ್ರಾಯವನ್ನು ಕೋರಲಾಗಿದ್ದು, ಈ ಇಲಾಖೆಗಳು ಅಭಿಪ್ರಾಯಗಳು ನೀಡಿದ ಬಳಿಕ ರಾಜ್ಯಪಾಲರ ಅನುಮೋದನೆ ಪಡೆದು ಶೀಘ್ರವಾಗಿ ಏಕರೂಪ ಕಾಯಿದೆಯನ್ನು ಜಾರಿಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು. ಏಕರೂಪ ಪರಿನಿಯಮ ರಚನೆಯ ಪ್ರಕ್ರಿಯೆಯು ಹಲವು ಇಲಾಖೆಗಳೊಂದಿಗೆ ಸಮಾಲೋಚಿಸುವ ಹಾಗೂ ಹಲವು ಹಂತರ ಚರ್ಚೆಗಳನ್ನೊಳಗೊಂಡಿರುವುದರಿಂದ ಇದಕ್ಕೆ ಹೆಚ್ಚಿನ ಸಮಯದ ಅಗತ್ಯವಿರುತ್ತದೆ ಎಂದು ಸಚಿವರು ಹೇಳಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 