ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ 'ರೋಟಾ ವೈರಸ್ ಲಸಿಕೆ'ಗೆ ಚಾಲನೆ
ಬೆಂಗಳೂರು ಆಗಸ್ಟ್ 25 ಮಾರಣಾಂತಿಕ ಅತಿಸಾರ ಭೇದಿ ಖಾಯಿಲೆ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ಹೊರತಂದಿರುವ ರೋಟಾ ವೈರಸ್ ಲಸಿಕೆಯನ್ನು ಸಾಂಕೇತಿಕವಾಗಿ ಶಿಶುಗಳಿಗೆ ಲಸಿಕಾ ಹನಿ ನೀಡುವ ಮೂಲಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪರಿಚಯಿಸಿದರು
ಮಾಹಿತಿಗಳ ಪ್ರಕಾರ ಭಾರತದಲ್ಲಿ ಪ್ರತಿ ವರ್ಷ 5 ವರ್ಷದೊಳಗಿನ 32.7 ಲಕ್ಷ ಮಕ್ಕಳು ಅತಿಸಾರ ಭೇದಿಯಿಂದ ಬಳಲುತ್ತಾರೆ. ಇದರಲ್ಲಿ 78ಸಾವಿರ ಮಕ್ಕಳು ಸಾವಿಗಿಡಾಗುತ್ತಾರೆ. ಈ ಮಾರಣಾಂತಿಕ ಖಾಯಿಲೆಗೆ ಉತ್ತರವಾಗಿ ಆರೋಗ್ಯ ಇಲಾಖೆ ರೋಟಾ ವೈರಸ್ ಲಸಿಕೆಯನ್ನು ಪರಿಚಯಿಸುತ್ತಿದೆ. ಈ ಲಸಿಕೆಯನ್ನು 6, 10 ಹಾಗೂ 14 ವಾರಗಳ ಶಿಶುಗಳಿಗೆ ನೀಡಲಾಗುವುದು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಆರೋಗ್ಯ ಇಲಾಖೆಯ ಈ ಅಭಿಯಾನ ಶ್ಲಾಘನೀಯ. ಸರಿಯಾದ ಸಮಯದಲ್ಲಿ ಮಕ್ಕಳಿಗೆ ಈ ಲಸಿಕೆ ನೀಡಿ ಸಾವಿನ ಪ್ರಮಾಣವನ್ನು ಕಡಿಮೆ ಮಾಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದಶರ್ಿಗಳಾದ ಜಾವೇದ್ ಅಕ್ತರ್, ಆಯುಕ್ತರಾದ ಪಂಕಜ್ ಕುಮಾರ್ ಪಾಂಡೆ, ಅಭಿಯಾನ ನಿದರ್ೆಶಕರಾದ ಡಿ. ಎಸ್. ರಮೇಶ್ ಮತ್ತಿತರ ಅಧಿಕಾರಿಗಳು, ವೈದ್ಯರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 