ಅಥಣಿ: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಲೋಕದರ್ಶನ ವರದಿ
ಅಥಣಿ 25: ಜನವಾಡ ಗ್ರಾಮದವರ ಬಹುದಿನಗಳ ಬೇಡಿಕೆಯಾಗಿದ್ದ ಹಿಪ್ಪರಗಿ ಆಣೆಕಟ್ಟಿನ ಝಿರೋ ಪಾಯಿಂಟ ಹಾಗೂ ಜನವಾಡ ರಸ್ತೆಯನ್ನು 2 ಕೋಟಿ 95 ಲಕ್ಷ ರೂಗಳ ವೆಚ್ಚದಲ್ಲಿ 6 ಕಿ.ಮೀ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ತಾಲೂಕಿನ ವಿವಿಧ ಗ್ರಾಮಗಳ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದೆಂದು ಶಾಸಕ ಮಹೇಶ ಕುಮಠಳ್ಳಿ ಹೇಳಿದರು.
ಅವರು ತಾಲೂಕಿನ ಜನವಾಡ ಗ್ರಾಮದಿಂದ ಝೀರೋಪಾಯಿಂಟ ವರೆಗಿನ ಲೋಕೊಪಯೋಗಿ ಇಲಾಖೆಯ ಅನುದಾನದಲ್ಲಿ ಮುಂಜುರಾದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಮುಂದಿನ ದಿನಗಳಲ್ಲಿ ತಮ್ಮ ಕ್ಷೇತ್ರದ ಎಲ್ಲ ಗ್ರಾಮಗಳಿಗೂ ಸುಸಜ್ಜಿತ ಸಂಪರ್ಕ ರಸ್ತೆ, ಗುಣಮಟ್ಟದ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸುಜಾತಾ ಸನದಿ, ಓಂಕಾರಿ ಗುರವ, ಪಿ.ಡಬ್ಲು.ಡಿ ಸಹಾಯಕ ಕಾರ್ಯನಿವರ್ಾಹಕ ಅಧಿಕಾರಿ ಎಂ.ಎಸ್.ಒಡೆಯರ, ಸಹಾಯಕ ಅಧಿಕಾರಿಗಳಾದ ಎ.ಜಿ. ಮುಲ್ಲಾ, ಎಸ್.ಬಿ. ಕರೆಬಸಪ್ಪನವರ, ರಾಣಿ ಚನ್ನಮ್ಮ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಘದ ಅಧ್ಯಕ್ಷ ಧರೇಪ್ಪ ಶಿವಪ್ಪ ಠಕ್ಕಣ್ಣವರ, ಮಹಮ್ಮದ ಕಮಾಲನವರ,ರಾಜು ಜಮಖಂಡಿಕರ, ಪ್ರಕಾಶ ಚನ್ನಣ್ಣವರ, ಬಸವರಾಜ ಠಕ್ಕಣ್ಣವರ, ಯಲ್ಲಪ್ಪ ಯಲಶೇಟ್ಟಿ, ಸುರೇಶ ಜಾಮಗೌಡ, ಮಲಿಕ್ ಕಮಾಲನವರ, ಅಶೋಕ ಶೇಟೆ, ಗುರುಬಸು ಕಾಂಬಳೆ, ಈರಪ್ಪ ಬಾಡಗಿ, ನಾಗಪ್ಪ ಗುರವ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 