ಬೈಲವಾಡ ಕೆರೆ ಪುನರುಜ್ಜೀವನ ಕಾರ್ಯಕ್ಕೆ ಚಾಲನೆ
ಬೆಳಗಾವಿ, 7: ಅನೇಕ ವರ್ಷಗಳಿಂದ ಹೂಳಿನಿಂದ ತುಂಬಿಕೊಂಡು ನೀರು ನಿಲ್ಲದಂತ ಪರಿಸ್ಥಿತಿ ನಿಮರ್ಾಣವಾಗಿದ್ದ ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದ ಸುಮಾರು 8 ಎಕರೆ ವಿಸ್ತೀರ್ಣದ ಕೆರೆಯ ಪರಿಸ್ಥಿಯನ್ನು ಗಮನಿಸಿದ ಬೆಳಗಾವಿಯ ಪ್ಯಾಸ ಫೌಂಡೇಶನ್ ಎಂಬ ಸೇವಾ ಸಂಸ್ಥೆಯು ಹೂಳೆತ್ತುವ ಕಾರ್ಯಕ್ಕೆ ಇಂದು ಚಾಲನೆ ನೀಡಿದೆ.
ಮಳೆಗಾಲದಲ್ಲಿ ಕೆರೆಯಲ್ಲಿ ನೀರು ಸಂಗ್ರವಾಗುತ್ತಿದ್ದರೂ ಕೂಡ ಜನೇವರಿಯ ಹೊತ್ತಿನ ಬೇಸಿಗೆಯಲ್ಲಿ ಕೆರೆಯು ಸಂಪೂರ್ಣವಾಗಿ ಒಣಗಿ ಹೋಗುತ್ತಿತ್ತು. ಇದರಿಂದ ಗ್ರಾಮದ ಜನರು ನೀರಿಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದರು. ಆದ್ದರಿಂದ ಅದರ ಪುನರುಜ್ಜೀವನಗೊಳಿಸಲು ಮುಂದೆ ಬಂದ ಪ್ಯಾಸ ಫೌಂಡೆಶನ್ ಕೆರೆಯನ್ನು ಸುಮಾರು 5 ಅಡಿಗಳ ಆಳ ಹೂಳೆತ್ತಿನೀರು ಸಂಗ್ರಹದ ಸಾಮಥ್ರ್ಯವನ್ನು ದ್ವಿಗುಣಗೊಳಿಸಲಿದೆ. ಇದರಿಂದ 7 ಸಾವಿರ ಜನಸಂಖ್ಯೆಯುಳ್ಳ ಗ್ರಾಮಕ್ಕೆ ನೀರು ಲಭಿಸಲಿದ್ದು, ಸುತ್ತಲಿನ ಪ್ರದೇಶದ ಅಂತರ್ಜಲ ಮಟ್ಟವು ಹೆಚ್ಚಲಿದೆ. ಹೂಳೆತ್ತುವ ಕಾರ್ಯವು ಮೇಗೆ ಕೊನೆಗೊಳ್ಳಲಿದೆ.
ಹೂಳೆತ್ತುವ ಕಾರ್ಯಕ್ಕೆ ಫೌಂಡೇಶನ್ನ ಅಧ್ಯಕ್ಷರಾದ ಡಾ. ಮಾಧವ ಪ್ರಭು ಅವರು ಪೂಜೆ ಸಲ್ಲಿಸಿ, ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಡಾ ಪ್ರೀತಿ ದೊಡವಾಡ ಕೋರೆ, ಅಭಿಮನ್ಯು ಡಾಗಾ, ಸತೀಶ ಲಾಡ, ದೇಪಕ ಓವುಲಕರ, ಗೋಪಾಲ ಗಾವಡೆ, ಮಹೇಶ ಬಾಗಿ, ಬೈಲವಾಡ ಗ್ರಾ.ಪಂ ಅಧ್ಯಕ್ಷೆ ದ್ರಾಕ್ಷಾಯಣಿ ಗಿರೆಪ್ಪನವರ, ಜಿ ಪಂ. ಸದಸ್ಯರಾದ ಅನಿಲ ಮಾಕಲಮರಡಿ, ತಾ ಪಂ. ಕಾರ್ಯಕಾರಿ ಅಧಿಕಾರಿ ಮುಲ್ಲಾ, ವಿ ಆರ್ ಗಿರೆಪ್ಪನವರ, ರಾಮನಗೌಡರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 