ಉತ್ತಂಗಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
Driver loses control, car overturns near Utthangi
ಲೋಕದರ್ಶನ ವರದಿ
ಹೂವಿನಹಡಗಲಿ 10 : ಚಾಲಕನ ನಿಯಂತ್ರಣ ತಪ್ಪಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಒಂದು ಕಾರು ರಸ್ತೆ ಬದಿ ಪಲ್ಟಿಯಾದ ಘಟನೆ ತಾಲ್ಲೂಕಿನ ಉತ್ತಂಗಿ ಗ್ರಾಮದ ತೀರ್ಥರಾಮೇಶ್ವರ ಪ್ಲಾಟ್ ಬಳಿ ಗುರುವಾರಸಂಭವಿಸಿದೆ. ಹೂವಿನಹಡಗಲಿಯಿಂದ ಇಟ್ಟಿಗಿ ಕಡೆ ಹೊರಟಿದ್ದ ಕಾರು ಮತ್ತು ಇಟ್ಟಿಗಿ ಕಡೆಯಿಂದ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಯಾವುದೇ ಪ್ರಾಣಾ ಹಾನಿಯಾಗಿಲ್ಲ. ಮಾರ್ಗದಲ್ಲಿ ಹೊರಟಿದ್ದ ಪ್ರಯಾಣಿಕರು ಹಾಗೂ ಹೊಸ ಪ್ಲಾಟ್ ನಿವಾಸಿಗಳು ಧಾವಿಸಿ ಕಾರಿನಲ್ಲಿದ್ದವರ-ನ್ನು ರಕ್ಷಿಸಿದ್ದಾರೆ.’ಅರಭಾವಿ- ಚಳ್ಳಕೆರೆ ರಾಜ್ಯ ಹೆದ್ದಾರಿಯ ಆಯ್ದ ಭಾಗಗಳಲ್ಲಿ ದುರಸ್ತಿ ಕಾರ್ಯ ಆಮೆಗತಿಯಲ್ಲಿ ಸಾಗಿದೆ. ರಸ್ತೆ ಅಗೆದು ಜಲ್ಲಿಕಲ್ಲು ಹರಡಿ ಎರಡೂರು ತಿಂಗಳಾದರೂ ಕಾಮಗಾರಿ ಇನ್ನೂ ಪೂರ್ಣಗೊ ಳಿಸಿಲ್ಲ. ವೇಗದಲ್ಲಿರುವ ವಾಹನಗಳು ಇಲ್ಲಿ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸುತ್ತಿವೆ. ಬೈಕ್ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಲೋಕೋಪಯೋಗಿ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣ’ ಎಂದು ಈರುಳ್ಳಿ ಬೆಳೆಗಾರರ ಸಂಘದ ಅಧ್ಯಕ್ಷ ಎನ್.ಎಂ. ಸಿದ್ದೇಶ ಆರೋಪಿಸಿದ್ದಾರೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 