ಲಾಕ್ಡೌನ್ ಪರಿಹಾರ ಪಡೆಯಲು ಚಾಲಕರಿಗೆ ಪ್ಯಾನ್ಕಾರ್ಡ್, ಪಿಟ್ನೆಸ್ ಸರ್ಟಿಫಿಕೇಟ್ ಅಗತ್ಯ ಇಲ್ಲ: ನಿಯಮ ಸಡಿಲಿಸಿದ ಸರ್ಕಾರ
ಬೆಂಗಳೂರು, ಮೇ 21,ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ 5000 ರೂ. ಪರಿಹಾರ ಪಡೆಯಲು ಚಾಲಕರಿಗೆ ಪ್ಯಾನ್ಕಾರ್ಡ್, ಪಿಟ್ನೆಸ್ ಸರ್ಟಿಫಿಕೇಟ್ ಅಗತ್ಯ ಇಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.ಚಾಲಕರು ಸಂಕಷ್ಟದಲ್ಲಿರುವುದನ್ನು ಕಂಡು ಮುಖ್ಯಮಂತ್ರಿಗಳು ಆಟೋ ಮತ್ತು ಕ್ಯಾಬ್ ಚಾಲಕರಿಗೆ 5000 ಸಾವಿರ ರೂ. ಹಣವನ್ನು ಪರಿಹಾರವಾಗಿ ನೀಡಲು ಉದ್ದೇಶಿಸಿ ಚಾಲಕರಿಂದ ಅರ್ಜಿ ಆಹ್ವಾನಿಸಲಾಗಿತ್ತು. ಇದಕ್ಕೆ ಪ್ಯಾನ್ಕಾರ್ಡ್ ಮತ್ತು ಪಿಟ್ನೆಸ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಿತ್ತು. ಈ ಕುರಿತು ತೀವ್ರ ವಿರೋಧ ವ್ಯಕ್ತವಾದ ಕಾರಣ ಹೊಸ ನಿಯಮ ತೆಗೆದುಹಾಕುವ ಮೂಲಕ ಚಾಲಕರಿಗೆ ಗುಡ್ ನ್ಯೂಸ್ ನೀಡಿದೆ.
ಗುರುವಾರ ವಿಕಾಸಸೌಧದಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಶಾಸಕ ದಿನೇಶ್ ಗುಂಡೂರಾವ್ ಹಾಗೂ ಸಾರಿಗೆ ಆಯುಕ್ತ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚಾಲಕರು ನೆರವು ಪಡೆಯಲು ಪ್ಯಾನ್ಕಾರ್ಡ್ ಮತ್ತು ಪಿಟ್ನೆಸ್ ಸರ್ಟಿಫಿಕೇಟ್ ಅಗತ್ಯ ಇಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ.
ಪರಿಹಾರ ಪಡೆಯಲು ಚಾಲಕರು ಪ್ಯಾನ್ ಕಾರ್ಡ್ ಮತ್ತು ಫಿಟ್ನೆಸ್ ಪತ್ರವನ್ನು ಕಡ್ಡಾಯವಾಗಿ ನೀಡಬೇಕೆಂದು ಸೂಚನೆ ನೀಡಲಾಗಿತ್ತು. ಆದರೆ ಲಾಕ್ಡೌನ್ ಸಂದರ್ಭದಲ್ಲಿ ಪಿಟ್ನೆಸ್ ಪತ್ರವನ್ನು ನೀಡಲು ಕಷ್ಟಕರವಾಗಿದೆ. ಎಷ್ಟೋ ಆಟೋ ಚಾಲಕರ ಬಳಿ ಪ್ಯಾನ್ ಕಾರ್ಡ್ ಇರುವುದಿಲ್ಲ. ಇಂತಹವರಿಗೆ ಪ್ಯಾನ್ ನೀಡಲು ಕಷ್ಟವಾಗಿದೆ ಎಂದು ಚಾಲಕರ ಒಕ್ಕೂಟ ನಿಯಮ ಸಡಿಲಿಸುವಂತೆ ಆಗ್ರಹಿಸಿತ್ತು.ಈ ಎಲ್ಲಾ ಅಂಶಗಳನ್ನು ಗಮದಲ್ಲಿಟ್ಟುಕೊಂಡು ಚಾಲಕರಿಗೆ ಕೇವಲ ಡಿಎಲ್ (ಚಾಲನಾ ಪರವಾನಗಿ) ಮತ್ತು ಆಧಾರ್ ಕಾರ್ಡ್ ಪಡೆಯುವ ಮೂಲಕ ಚಾಲಕರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಚಾಲಕರ ಬೇಡಿಕೆಗೆ ಸ್ಪಂದಿಸಿದೆ ಎಂದು ಚಾಲಕರ ಒಕ್ಕೂಟದ ಅಧ್ಯಕ್ಷ ಗಂಡಸಿ ಸದಾನಂದಸ್ವಾಮಿ ತಿಳಿಸಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 