ಜಾಗೃತಿ ಸಂಚಾರಿ ವಾಹನಕ್ಕೆ ನ್ಯಾಯಾಧೀಶರಿಂದ ಚಾಲನೆ
ಹಾವೇರಿ 31: ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ದತಿ ನಿರ್ಮೂಲನೆ ಜನಜಾಗೃತಿ ಸಂಚಾರಿ ವಾಹನಕ್ಕೆ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಿ.ಆರ್.ಮುತಾಲಿಕದೇಸಾಯಿ ಅವರು ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಚಾಲನೆ ನೀಡಿದರು.
ಪ್ರಭಾರ ಜಿಲ್ಲಾಕಾರ್ಮಿಕ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ರಾಘವೇಂದ್ರ.ಬ.ಶಿರೂರ ಇತರರು ಉಪಸ್ಥಿತರಿದ್ದರು.