ಪರವಾನಗಿ ಇಲ್ಲದೇ ವಾಹನ ಚಾಲನೆ ಅಪರಾಧ : ನ್ಯಾಯಾದೀಶ ಸುನೀಲ
Driving without a license is an offence: Justice Sunil
ಪರವಾನಗಿ ಇಲ್ಲದೇ ವಾಹನ ಚಾಲನೆ ಅಪರಾಧ : ನ್ಯಾಯಾದೀಶ ಸುನೀಲ
ಶಿಗ್ಗಾವಿ 27: ಅಲ್ಪ ವಯೋಮಾನದಲ್ಲಿ ಪರವಾನಗಿ ಇಲ್ಲದೇ ವಾಹನ ಚಾಲನೆ ಅಪರಾಧ ಎಂದು ನ್ಯಾಯಾದೀಶ ಸುನೀಲ ತಳವಾರ ತಿಳಿ ಹೇಳಿದರು. ತಾಲೂಕಿನ ಹಿರೇಬೆಂಡಿಗೇರಿ ಗ್ರಾಮದಲ್ಲಿ ರಂಭಾಪುರಿ ಜಗದ್ಗುರು ವೀರಗಂಗಾಧರ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನಾ ವಾರ್ಷಿಕ ವಿಶೇಷ ಶಿಬಿದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು ಗ್ರಾಹಕರು ಅಪರಾಧ ಮಾಡಿದರೆ ದಂಡ ಶಿಕ್ಷೆಗೆ ಗುರಿಯಾಗುತ್ತಾರೆ ನಂತರ ಶಿಬಿರಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿ ಜಾಗ್ರತಿ ಮೂಡಿಸಿದರು. ನ್ಯಾಯಾದೀಶೆ ಅಶ್ವಿನಿ ಚಂದ್ರಕಾಂತ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಹೆಚ್ಚು ದೌರ್ಜನ್ಯಗಳ ನಡೆಯುತ್ತಿವೆ ಆದ್ದರಿಂದ ಮಹಿಳೆಯರು ಕಾನೂನನ್ನು ಕರಗತ ಮಾಡಿಕೊಂಡುಜಾಗೃತರಾಗಿರಿ ಎಂದರು.
ನ್ಯಾಯವಾದಿ ವ್ಹಿ. ಸಿ. ಪಾಟೀಲ ಮಾತನಾಡಿ ಮೋಟಾರು ಕಾಯ್ದೆ, ಕೌಟುಂಬಿಕ ಸಮಸ್ಯೆ, ಮತ್ತು ಗ್ರಾಹಕರ ಕಾಯ್ದೆಯ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು.ಕಾರ್ಯಕ್ರಮಾಧಿಕಾರಿ ಪ್ರೊ ಶಿವಯ್ಯ ಪೂಜಾರ ಪ್ರಾಸ್ಥಾವಿಕವಾಗಿ ಮಾತನಾಡಿದರು. ವೇ ಮೂ ರೇವಣಸಿದ್ಧಯ್ಯಾ ಹಿರೇಮಠ ಸಾನಿಧ್ಯವಹಿಸಿದ್ದರು. ನ್ಯಾಯವಾದಿಗಳಾದ ಎಫ್ ಬಿ, ಗಂಜೀಗಟ್ಟಿ, ಬಿ ಪಿ ಗುಂಡಣ್ಢವರ, ಎಮ್. ಆಯ್. ಗೋಣೆಪ್ಪನವರ, ಪಿ. ಆರ್.ಕಲ್ಯಾಣಿ ಮುಂತಾದವರು ಉಪಸ್ಥಿತರಿದ್ದರು.ಕುಮಾರಿ ಸುಜಾತಾ ಪಾಟೀಲ ಕಾರ್ಯಕ್ರಮ ನಿರೂಪಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 