ಕೊರೆಯುವ ಚಳಿ, ಸುರಿವ ಹಿಮ , ಜನಜೀವನ ತತ್ತರ .
ನವದೆಹಲಿ, ಡಿಸೆಂಬರ್ 21 ಉತ್ತರ ಭಾರತದಲ್ಲಿ ಮೈ ಕೊರೆಯುವ ಚಳಿ, ಹಿಮಪಾತ, ದಟ್ಟ ಮಂಜಿನ ವಾತವರಣದಿಂದ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಷ್ಠ್ರ ರಾಜಧಾನಿಯಲ್ಲಿ ದಟ್ಟ ಮಂಜಿನಿಂದಾಗಿ 760 ವಿಮಾನಗಳ ಆಗಮನ ವಿಳಂಬವಾಗಿದ್ದು, 19 ವಿಮಾನಗಳ ಸಂಚಾರ ರದ್ದುಪಡಿಸಲಾಗಿದೆ. 100ಕ್ಕೂ ಹೆಚ್ಚು ರೈಲುಗಳು ಸಂಚಾರ ಸಹ ಏರುಪೇರಾಗಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶಗಳಲ್ಲಿ
ವ್ಯಾಪಕ ಹಿಮಪಾತವಾಗುತ್ತಿದೆ. ಎನ್ಸಿಆರ್ ಪ್ರದೇಶದಲ್ಲಿ ಕನಿಷ್ಠ ತಾಪಮಾನ 6.4 ಡಿಗ್ರಿ ಸೆಲ್ಷಿಯಸ್ಗೆ
ಇಳಿದಿದೆ. ಶನಿವಾರ ಕೂಡಾ ತೀವ್ರ ಚಳಿ ಪರಿಸ್ಥಿತಿ
ಮುಂದುವರಿಯಲಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ
ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಿಮಾಚಲ ಪ್ರದೇಶದ ಕಿಲಾಂಗ್ ನಲ್ಲಿ ಕನಿಷ್ಠ ತಾಪಮಾನ ಮೈನಸ್
6 ಡಿಗ್ರಿ ತಲುಪಿದೆ. ಪ್ರಸಿದ್ದ ಪ್ರವಾಸಿ ತಾಣ ಮನಾಲಿಯಲ್ಲಿ 2 ಡಿಗ್ರಿಗೆ ಇಳಿದಿದೆಪ್ರತಿಕೂಲ ಹವಾಮಾನ
ಕಾರಣ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ
ವಾಹನ ಸಂಚಾರ ರದ್ದುಪಡಿಸಲಾಗಿದೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 