ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನಲೆ 624 ಮೇವು ಬ್ಯಾಂಕ್, 297 ಗೋಶಾಲೆಗಳನ್ನು ತೆರೆಯಲು ಪ್ರಸ್ತಾವನೆ
ಬೆಳಗಾವಿ (ಸುವರ್ಣಸೌಧ), ಡಿ.19-ರಾಜ್ಯದ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ 624 ಮೇವು ಬ್ಯಾಂಕ್ಗಳನ್ನು ಹಾಗೂ 297 ಗೋಶಾಲೆಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಲಾಗಿದೆ.ಅಂಗೀಕಾರ ಸಿಕ್ಕರೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ತಿಳಿಸಿದರು.
ಬರಗಾಲದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ನಡೆದ ಸುದೀರ್ಘ ಚಚರ್ೆಯಲ್ಲಿ ಉತ್ತರ ನೀಡಿದ ಅವರು, 1.29 ಕೋಟಿ ಜಾನುವಾರುಗಳಿಗೆ 4.5 ಲಕ್ಷ ಮೆಟ್ರಿಕ್ ಟನ್ ಮೇವಿನ ಅಗತ್ಯವಿದೆ.ಮೇವು ಸಂಗ್ರಹಕ್ಕೆ ಗೋಶಾಲೆ ಆರಂಭ ಸೇರಿದಂತೆ 296.11 ಕೋಟಿ ರೂ.ಗಳಿಗೆ ಪ್ರಸ್ತಾವನೆಯನ್ನು ಸಕರ್ಾರಕ್ಕೆ ಸಲ್ಲಿಸಲಾಗಿದೆ.ಅದು ಅಂಗೀಕಾರಗೊಂಡ ಬಳಿಕ ಕೆಲಸ ಪ್ರಾರಂಭಿಸಲಾಗುವುದು ಎಂದರು.
ಯಾದಗಿರಿಯಲ್ಲಿ 150 ಟನ್, ರಾಯಚೂರಿನಲ್ಲಿ 200-300 ಟನ್ ಮೇವು ದಾಸ್ತಾನಿದೆ.ಕೋಲಾರ, ಬೆಳಗಾವಿ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ರೈತರಿಂದ ಮೇವು ಖರೀದಿಸಿ ಬಂಡಲ್ ಮಾಡಿ ದಾಸ್ತಾನು ನೀಡಲು ಟೆಂಡರ್ ಕರೆಯಲಾಗಿದೆ.ಭತ್ತ ಬೆಳೆಯುವ ಪ್ರದೇಶಗಳಲ್ಲಿ ಮೇವನ್ನು ಬ್ಲಾಕ್ (ಹೊರೆಕಟ್ಟಿ) ಸಂಗ್ರಹಿಸಿಡಲಾಗುವುದು.ಇದರಿಂದ ಸಾಗಾಣಿಕೆಗೂ ಸುಲಭವಾಗಲಿದೆ. ಈಗಾಗಲೇ ರಾಜ್ಯಾದ್ಯಂತ 8,11,191 ಮೇವು ಬೀಜದ ಮಿನಿ ಕಿಟ್ಗಳನ್ನು ವಿತರಿಸಲಾಗಿದೆ. ಇದರಿಂದ ಸುಮಾರು 30 ಲಕ್ಷ ಹಸಿರು ಮೇವು ಉತ್ಪಾದನೆ ನಿರೀಕ್ಷೆ ಇದ್ದು, ನವೆಂಬರ್ನಿಂದ ಮಾಚರ್್ವರೆಗೂ ಹಂಚಿಕೆ ಮಾಡಲು ಸಾಧ್ಯವಾಗುತ್ತದೆ.ಮೇವು ಬೆಳೆಯುವ ಸಲುವಾಗಿ 20.66 ಕೋಟಿ ರೂ.ಖಚರ್ು ಮಾಡಲಾಗುತ್ತಿದೆ ಎಂದರು.
ನ.23ರಿಂದ ಹೊರರಾಜ್ಯಗಳಿಗೆ ಮೇವು ಸಾಗಣೆ ನಿಷೇಧಿಸಲಾಗಿದ್ದು, ಸದ್ಯಕ್ಕೆ ರಾಜ್ಯದಲ್ಲಿ ಎಲ್ಲಿಯೂ ಗೋಶಾಲೆ ತೆರೆಯುವ ಸ್ಥಿತಿ ನಿಮರ್ಾಣವಾಗಿಲ್ಲ. ಅಂತಹ ಸ್ಥಿತಿ ಕಂಡುಬಂದರೆ ಗೋಶಾಲೆ ತೆರೆಯಲು ಕ್ರಮ ವಹಿಸಲಾಗುವುದು.ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದು, ತವರು ಜಿಲ್ಲೆಯಲ್ಲಿ ಮೇವು ಲಭ್ಯವಿಲ್ಲದಿದ್ದರೆ ನೆರೆ ಜಿಲ್ಲೆಯಿಂದ ಮೇವು ಖರೀದಿಸುವಂತೆ ತಾಕೀತು ಮಾಡಲಾಗಿದೆ.ಪ್ರತಿ ಶನಿವಾರ ಬರ ಪರಿಸ್ಥಿತಿ ಬಗ್ಗೆ ವರದಿ ಪಡೆಯಲಾಗುತ್ತಿದೆ.ಬೇಸಿಗೆ ಕಾಲದಲ್ಲಿ ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಹರಡುವುದನ್ನು ತಪ್ಪಿಸಲು ಲಸಿಕೆ ನೀಡಲಾಗುವುದು ಎಂದು ವಿವರಿಸಿದರು.
ಕೆಎಂಎಫ್ ಸಹಯೋಗದಲ್ಲಿ ಮೇವು ಬೆಳೆಯುವ ಯೋಜನೆಯನ್ವಯ ಕೋಲಾರದಲ್ಲಿ ಪ್ರಾಯೋಗಿಕವಾಗಿ ಮೇವು ಬೆಳೆಯಲು ಕ್ರಮ ಕೈಗೊಳ್ಳಲಾಗಿದೆ.ಅದೇ ಮಾದರಿಯನ್ನು ಇತರೆ ಜಿಲ್ಲೆಗಳಿಗೂ ವಿಸ್ತರಿಸಿ ಕೆಎಂಎಫ್ ಸಹಯೋಗದಲ್ಲಿ ಮೇವು ಬೆಳೆಯಲಾಗುವುದು ಎಂದು ತಿಳಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 