ಮಾದಕ ವಸ್ತುಗಳ ನಿಷೇಧ ಜಾಗೃತಿ ಅಭಿಯಾನ: ಬೃಹತ್ ಜಾತಾ
Drug prohibition awareness campaign:Rally
ತಾಳಿಕೋಟಿ 27: ವಿಜಯಪುರ ಜಿಲ್ಲಾ ಪೊಲೀಸ್, ಬಸವನ ಬಾಗೇವಾಡಿ ಉಪವಿಭಾಗ ಹಾಗೂ ತಾಳಿಕೋಟಿ ಪೊಲೀಸ್ ಠಾಣೆ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ನಿಷೇಧ ಜಾಗೃತಿ ಅಭಿಯಾನದ ಅಂಗವಾಗಿ ಗುರುವಾರ ಶಾಲಾ ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾತಾ ಹಮ್ಮಿಕೊಳ್ಳಲಾಯಿತು.
ಜಾತಾಕ್ಕೆ ತಹಸಿಲ್ದಾರ್ ಡಾ.ವಿನಯಾ ಹೂಗಾರ ಚಾಲನೆ ನೀಡಿದರು. ಪಟ್ಟಣದ ಶರಣಮುತ್ಯಾ ದೇವಸ್ಥಾನದಿಂದ ಆರಂಭವಾದ ಜಾತಾದಲ್ಲಿ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕೈಯಲ್ಲಿ ಮಾದಕ ವಸ್ತುಗಳ ಸೇವನೆಯ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೈಯಲ್ಲಿ ಹ್ಯಾಂಡ್ ಪೋಸ್ಟರ್ಸ್ಗಳನ್ನು ಹಿಡಿದುಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಖಾಸ್ಗತೇಶ್ವರ ಸಭಾಭವನಕ್ಕೆ ತಲುಪಿದರು. ಅಲ್ಲಿ ವೇದಿಕೆ ಕಾರ್ಯಕ್ರಮ ಜರಗಿತು.
ಶಿಕ್ಷಕ ಗುಂಡೂರಾವ ಧನಪಾಲ ಅವರು ಮಾತನಾಡಿ ನಶೆ ತರುವ ವಸ್ತುಗಳ ಸೇವನೆಯಿಂದ ಮನುಷ್ಯನ ಆರೋಗ್ಯ ಶಾಂತಿ ನೆಮ್ಮದಿ ಕಳೆದುಕೊಳ್ಳುತ್ತಾನೆ. ಆದ್ದರಿಂದ ಮಾದಕ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು. ಪಿಎಸ್ಐ ರಾಮನಗೌಡ ಸಂಕನಾಳ, (ಅ.ವಿ.)ಆರ್.ಎಸ್.ಭಂಗಿ, ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಚಾರ್ಯರು ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 