ನರೇಗಾ ಕಾರ್ಮಿಕರಿಗೆ ಇ-ಕೆವೈಸಿ ಕಡ್ಡಾಯ: ಇಒ ಚೆಲುವಯ್ಯ
E-KYC mandatory for NREGA workers: EO Cheluvaiah
ನರೇಗಾ ಕಾರ್ಮಿಕರಿಗೆ ಇ-ಕೆವೈಸಿ ಕಡ್ಡಾಯ: ಇಒ ಚೆಲುವಯ್ಯ
ದೇವರಹಿಪ್ಪರಗಿ 18: ತಾಲ್ಲೂಕಿನ 14 ಗ್ರಾಮ ಪಂಚಾಯಿತಿಗಳ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ್ಗಳಲ್ಲಿರುವ ಎಲ್ಲಾ ಸದಸ್ಯರು ಸೆಪ್ಟೆಂಬರ್ 30ರ ಒಳಗಾಗಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚೆಲುವಯ್ಯ ತಿಳಿಸಿದ್ದಾರೆ.ತಾಲೂಕಿನ ಚಿಕ್ಕರೂಗಿ ಗ್ರಾ.ಪಂ ವ್ಯಾಪ್ತಿಯಲ್ಲಿ ಶನಿವಾರದಂದು ಇ-ಕೆವೈಸಿ ಅಭಿವ ಅಭಿಯಾನದಲ್ಲಿ ಮಾತನಾಡಿದರು. ನಂತರ ಗ್ರಾಮದ ಸಂತೆಯಲ್ಲಿ ಪಿಡಿಒ ಶಿವಾನಂದ ಮೂಲಿಮನಿ ಹಾಗೂ ಐಇಸಿ ಸಂಯೋಜಕ ಸಿದ್ದು ಕಾಂಬಳೆ ಅವರ ನೇತೃತ್ವದಲ್ಲಿ ಸುಮಾರು ನೂರಕ್ಕೂ ಹೆಚ್ಚು ಕೂಲಿಕಾರರ ಇ-ಕೆವೈಸಿ ಮಾಡುವ ಮೂಲಕ ಮಾತನಾಡಿದ ಅವರು, ತಾಲೂಕಿನಲ್ಲಿ ಒಟ್ಟು 14 ಗ್ರಾಪಂ ಗಳ ಪೈಕಿ 16995 ಸಕ್ರಿಯ ಉದ್ಯೋಗ ಕಾರ್ಡುಗಳಿದ್ದು.
ಅದರಲ್ಲಿ ಈಗಾಗಲೇ 2808 ಇ-ಕೆವೈಸಿ ಮಾಡಲಾಗಿದೆ. ಮಣೂರ-2387, ಜಾಲವಾದ-1879 ಹಾಗೂ ಹುಣಶ್ಯಾಳ-1708 ಉದ್ಯೋಗ ಕಾರ್ಡಗಳಿದ್ದು. ಬಾಕಿ ಇರುವ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಹಾಗೂ ಪಿಡಿಓ ಅವರು ಹೆಚ್ಚಿನ ಗಮನ ನೀಡಬೇಕು ಎಂದು ಮೇಲಾಧಿಕಾರಿಗಳು ತಿಳಿಸಿದ್ದಾರೆ.ಗ್ರಾಮೀಣ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕರಾದ ಶಾಂತಗೌಡ ನ್ಯಾಮಣ್ಣವರ ಅವರು ಮಾತನಾಡಿ, ಮನರೇಗಾ ಯೋಜನೆ ಪರಿಣಾಮಕಾರಿ ಹಾಗೂ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಇ-ಕೆವೈಸಿ ಮಾಡಲಾಗುತ್ತಿದೆ. ಕೂಲಿ ಕಾರ್ಮಿಕರು ತಮ್ಮ ಕಾರ್ಡುಗಳ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಗ್ರಾಮದ ಪ್ರಮುಖರು ಗಣ್ಯರು ಹಾಗೂ ಗ್ರಾಪಂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 