ಇ.ವಿ.ಎಂ, ವಿ.ವಿ. ಪ್ಯಾಟ್ ಮತ ಯಂತ್ರದ ಮಾಹಿತಿ ಕಾರ್ಯಾಗಾರ
ಕೊಪ್ಪಳ 23: ಜಿಲ್ಲಾ ಸ್ವೀಪ್ ಸಮಿತಿಯಿಂದ ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾದ ಮತದಾನ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಕೊಪ್ಪಳ ಜಿಲ್ಲಾ ಸ್ವೀಪ ಸಮಿತಿ ವತಿಯಿಂದ ಗುರುವಾರದಂದು ತಾಲೂಕ ಮಟ್ಟದ ಅಧಿಕಾರಿಳಿಗೆ ಮತ್ತು ಗ್ರಾಮ ಪಂಚಾಯತಿಗಳ ಅಧ್ಯಕ್ಷರುಗಳಿಗೆ ಕಡ್ಡಾಯ ಮತದಾನ ಮಾಡುವಂತೆ ಪ್ರತಿಜ್ಞಾ ವಿಧಿ ಭೋಧಿಸುವುದರೊಂದಿಗೆ ಪ್ರತಿಯೊಬ್ಬರು ಮತದಾನ ಮಾಡುವಂತೆ ಮತ್ತು ಇ.ವಿ.ಎಂ. ಮತ್ತು ವಿ.ವಿ. ಪ್ಯಾಟ್ ಮತ ಖಾತ್ರಿ ಯಂತ್ರದ ಕುರಿತು ಮಾಹಿತಿ ಕಾಯರ್ಾಗಾರವನ್ನು ಹಮ್ಮಿಕೊಳ್ಳಲಾಯಿತು. ಅದರಂತೆ ಜಿಲ್ಲಾ ಆಡಿಟೋರಿಯಂ ಹಾಲ್ನಲ್ಲಿ ಜಿಲ್ಲಾ ಮತ್ತು ತಾಲೂಕ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಗ್ರಾಮ ಪಂಚಾಯತ ಮಟ್ಟದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮತ್ತು ಕಾರ್ಯದಶರ್ಿಗಳಿಗೆ ಮತ್ತು ಗಣಕ ಯಂತ್ರ ನಿವರ್ಾಹಕರುಗಳಿಗೆ ಕಡ್ಡಾಯ ಮತದಾನ ಮಾಡುವಂತೆ ಪ್ರತಿಜ್ಞಾ ವಿಧಿ ಭೋಧಿಸುವುದರೊಂದಿಗೆ ಪ್ರತಿಯೊಬ್ಬರು ಮತದಾನ ಮಾಡುವಂತೆ ಮತ್ತು ಇ.ವಿ.ಎಂ. ಮತ್ತು ವಿ.ವಿ. ಪ್ಯಾಟ್ ಮತ ಖಾತ್ರಿ ಯಂತ್ರದ ಕುರಿತು ಮಾಹಿತಿ ನೀಡಲಾಯಿತು.
ಜಿ.ಪಂ. ಸಭಾಂಗಣದಲ್ಲಿ ಹಾಗೂ ಶುಕ್ರವಾರದಂದು ಜಿಲ್ಲೆಯ ವಿವಿಧ ತಾಲೂಕಿನ ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರಿಗ ಕಡ್ಡಾಯ ಮತದಾನ ಮಾಡುವಂತೆ ಪ್ರತಿಜ್ಞಾ ವಿಧಿ ಭೋಧಿಸುವುದರೊಂದಿಗೆ ಪ್ರತಿಯೊಬ್ಬರು ಮತದಾನ ಮಾಡುವಂತೆ ಮತ್ತು ತಮ್ಮ ಸುತ್ತಲಿನ ವ್ಯಾಪ್ತಿಯಲ್ಲಿರುವ ನಾಗರೀಕರಿಗೆ ಮತದಾನದ ಮಹತ್ವದ ಕುರಿತು ಮಾಹಿತಿ ನೀಡುವಂತೆ ತಿಳಿಸಲಾಯಿತು. ಹಾಗೇ ಇ.ವಿ.ಎಂ. ಮತ್ತು ವಿ.ವಿ. ಪ್ಯಾಟ್ ಮತ ಖಾತ್ರಿ ಯಂತ್ರದ ಕುರಿತು ಜಾಗೃತಿ ಮೂಡಿಸಲಾಯಿತು ಎಂದು ಜಿ.ಪಂ. ಕಾಯರ್ಾಲಯವು ತಿಳಿಸಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 