ಶೈಕ್ಷಣಿಕ ಸಾಧಕರಿಗೆ ಪ್ರೋತ್ಸಾಹ ಅಗತ್ಯ: ಕೆ.ಜಿ. ಮೋಹನ್
Educational achievers need encouragement: K.G. Mohan
ರಾಣೇಬೆನ್ನೂರು 27: ಯಾವುದೇ ಪ್ರತಿಭೆಗಳಿಗೆ ಮತ್ತು ಅವರು ಮಾಡಿದ ವಿಶೇಷ ಸಾಧನೆಗೆ ಪ್ರೋತ್ಸಾಹ ನೀಡಿದಾಗ ಮಾತ್ರ ಅವರಲ್ಲಿರುವ ಆಂತರಿಕ ಶಕ್ತಿ ಮತ್ತಷ್ಟು ಹೆಚ್ಚಳವಾಗಲು ಮತ್ತು ಸಾಧನೆ ಮಾಡಲು ಸಾಧ್ಯವಾಗುವುದು ಎಂದು ಸ್ನೇಹ ದೀಪ ಅಂಧ ಅಂಗವಿಕಲರ ಸಂಸ್ಥೆಯ ಧರ್ಮದರ್ಶಿ ಕೆ.ಜಿ. ಮೋಹನ್ ಹೇಳಿದರು.
ಅವರು ಇಲ್ಲಿನ ಶ್ರೀರಾಮನಗರದಲ್ಲಿರುವ ಸಂಸ್ಥೆಯ ಸಭಾಭವನದಲ್ಲಿ ನಡೆದ, 9ನೇ ವಾರ್ಷಿಕೋತ್ಸವ, ದ್ವಿತೀಯ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳ ಅಭಿನಂದನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರಿಪೂರ್ಣ ಸೇವೆಯೇ ನಮ್ಮ ಸಂಸ್ಥೆಯ ಮುಖ್ಯ ಉದ್ದೇಶವಾಗಿದ್ದು, ಅದರ ಬೆಳವಣಿಗೆ ಮತ್ತು ಸಾಧನೆಗೆ ನಗರದ ನಾಗರಿಕರ ತುಂಬು ಸಹಕಾರದಿಂದ ಮಾತ್ರ ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪವನ್ ಕುಮಾರ ಮಲ್ಲಾಡದ, ಚಿಕ್ಕೋಡಿಯ ಪ್ರಾಚಾರ್ಯ ಪ್ರಕಾಶ ಗಂಗಾ, ರೋಟರಿ ಅಧ್ಯಕ್ಷ ಬಿ.ಜಿ. ಹಿರೇಮಠ, ಇನ್ನರ್ ವ್ಹಿಲ್ ಅಧ್ಯಕ್ಷ ಡಾ, ದೀಪಾಲಿ ಪುನೀತ್, ಸಂಸ್ಥೆಯ ವರದರಾಜು, ವರ್ತಕ ಜಿ.ಜಿ. ಹೊಟ್ಟಿಗೌಡ್ರ, ಸುಧೀರ್ ಕುರುವತ್ತಿ, ವಸಂತ ಹುಲ್ಲತ್ತಿ, ಸಂಜನಾ ಕುರುವತ್ತಿ ಪರಮೇಶಪ್ಪ ಮುದಿಗೌಡರ, ಸುಮಾ ಹೊಟ್ಟಿಗೌಡ್ರ ಸೇರಿದಂತೆ ಮತ್ತಿತರ ಗಣ್ಯರು ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 