ಮೂರು ಶಾಲೆಗಳಲ್ಲಿ ಶೈಕ್ಷಣಿಕ ಸಾಮಾಗ್ರಿ ವಿತರಣೆ ಕಾರ್ಯಕ್ರಮ
Educational material distribution program in three schools
ಬಳ್ಳಾರಿ, ಜುಲೈ 1: ಬಳ್ಳಾರಿ ಸೇವಾ ಸಮಿತಿ ವತಿಯಿಂದ ಬಳ್ಳಾರಿ ನಗರದ ಡಿ.ಸಿ. ಕಾಲೋನಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂದ್ರಾಳ ರಾಮನಗರ ಶಾಲೆ, ವಿಜಯಪುರ ಕ್ಯಾಂಪ್ ಮೂರು ಶಾಲೆಗಳಿಗೆ ಶೈಕ್ಷಣಿಕ ಸಾಮಾಗ್ರಿ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ ಅವರು ನೆರವೇರಿಸಿದರು. ಕಾರ್ಯಕ್ರಮದ ಅಂಗವಾಗಿ ಶಾಲೆಯ 250 ವಿದ್ಯಾರ್ಥಿಗಳಿಗೆ ಒಂದು ವರ್ಷದ ಅಗತ್ಯವಿರುವ ನೋಟಪುಸ್ತಕ, ಪೆನ್, ಪೆನ್ಸಿಲ್, ರಬ್ಬರ್, ಡ್ರಾಯಿಂಗ್ ಪುಸ್ತಕ, ಕಂಪಾಸ್ ಬಾಕ್ಸ್, ಎರೇಜರ್, ಶಾರ್್ನರ್, ಸ್ಕೆಚ್ ಪೆನ್, ಸ್ಕೇಲ್, ಬಳಪ ಹಾಗೂ ಶಾಲಾ ಬ್ಯಾಗ್ ಸೇರಿದಂತೆ ವಿವಿಧ ಶೈಕ್ಷಣಿಕ ಪ್ರೋತ್ಸಾಹದಾಯಕ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬಿಡಿಸಿಸ್ಘಿಐ ಮಾಜಿ ಅಧ್ಯಕ್ಷರಾದ ಡಾ. ರಮೇಶ್ ಗೋಪಾಲ್ ಮಾತನಾಡಿ, ಮಕ್ಕಳಿಗೆ ದೇಶಭಕ್ತ ಭಗತ್ ಸಿಂಗ್ ರವರ ಸಾಹಸ ಕಥೆಗಳನ್ನು ಬೋಧಿಸಿ, ಅವರಂತೆ ಸಾಹಸಿಗಳಾಗುವಂತೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರಾದ ಜೆ.ಸಿ. ನಾಗೇಶ, ಬಳ್ಳಾರಿ ಸೇವಾ ಸಮಿತಿ ಅಧ್ಯಕ್ಷರಾದ ಸುರೇಂದ್ರ ಕುಮಾರ್ ಭಪ್ನಾ, ಬಳ್ಳಾರಿ ಸೇವಾ ಸಮಿತಿ ಕಾರ್ಯದರ್ಶಿಗಳಾದ, ವಿ. ರಾಮಚಂದ್ರ, ಕಿರಾಣಿ ಅಂಗಡಿಯ ಅಸೋಸಿಯೇಷನ್ ಅಧ್ಯಕ್ಷರಾದ ವೀರಾಂಜಿನೇಯಲು, ಬಿ.ಎಸ್.ಎಸ್ ಮಾಜಿ ಅಧ್ಯಕ್ಷರಾದ ಸತ್ಯನಾರಾಯಣ, ಶಾಲೆಯ ಮುಖ್ಯ ಗುರುಗಳಾದ, ತಿಪ್ಪೆಸ್ವಾಮಿ ಹಾಗೂ ಎಲ್ಲಾ ಸಹ ಶಿಕ್ಷಕರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 